ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿಗೆ ಸಿಎಂಗೆ ಮನವಿ

ಯಾದಗಿರಿ:‌ ರಾಜ್ಯದ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ದಾರಿ ಸಮಸ್ಯೆ ಬಗ್ಗೆ ಹರಿಸುವ ಅಧಿಕಾರವನ್ನು ರಾಜ್ಯದ ಎಲ್ಲಾ ತಹಶೀಲ್ದಾರ ಗಳಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಯಾದಗಿರಿ ಜಿಲ್ಲಾಧಿಕಾರಿಯಾದ ಡಾ.ಸುಶೀಲ ಬಿ. ಮೂಲಕ ಬುಧವಾರದಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತರ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ರಾಜ್ಯಾದ್ಯಂತ ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ದಾರಿ ಕೊಡದ ಕಾರಣ ಜಮೀನು ಬೀಳು ಬಿದ್ದು ಬಿತ್ತನೆ ಆಗದೆ ರೈತ ಕುಟುಂಬವು ಉಪವಾಸ ಬಿದ್ದಿವೆ ಎಂದರು.

ಹಳ್ಳಿಗಳಲ್ಲಿ ದಾರಿಗಾಗಿ ರೈತರ ಮಧ್ಯೆ ದ್ವೇಷದ ವಾತಾವರಣ ಉಂಟಾಗಿ ಒಡೆದಾಟಗಳು ನಡೆಯುತ್ತಿದ್ದು ರಾಜ್ಯದ ಕೆಲವು ಕಡೆ ಕೊಲೆಯಾದ ಉದಾಹರಣೆಗಳು ಸಹ ಇವೆ. ನಕ್ಷೆಯಲ್ಲಿ ದಾರಿ ಗುರುತು ಇದ್ದರೆ ಮಾತ್ರ ಐದು ಹೋಗಲು ಅವಕಾಶ ಕೊಡುತ್ತಾರೆ ಇಲ್ಲದಿದ್ದರೆ ನ್ಯಾಯಾಲಯಕ್ಕೆ ಹೋಗಬೇಕು . ಪ್ರಕರಣ ಇತ್ಯರ್ಥವಾಗಲು ಕನಿಷ್ಠ ಹತ್ತರಿಂದ ಹನ್ನೆರಡು ವರ್ಷ ಬೇಕಾಗುತ್ತದೆ ಅಲ್ಲಿಯವರೆಗೂ ರೈತರ ಪರಿಸ್ಥಿತಿ ಏನಾಗುತ್ತದೆ ಎಂಬುದು ಸರ್ಕಾರ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದರು.

ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡಿದ್ದ ಪರಿಣಾಮ, ಕಾಟಾಚಾರಕ್ಕೆ ಎಂಬಂತೆ ಸುತ್ತಲೇ ಹೊರಡಿಸಿತು. ಆದರೆ ರಾಜ್ಯದ ಯಾರೊಬ್ಬರು ತಹಶೀಲ್ದಾರರು ಇಲ್ಲಿವರೆಗೂ ದಾರಿ ಸುಗಮಗೊಳಿಸಿದ ಉದಾಹರಣೆ ಇಲ್ಲ ಎಂದು‌ ಆರೋಪಿಸಿದರು.

ಅನುಭೋಗದ ಹಕ್ಕು1882- 1973 ಅಧಿನಿಯಮ 197ರ ಪ್ರಕಾರ ಅಂದರೆ ಈಜಾಮೆಂಟ್ ಪ್ರಕಾರ(Easement Rights) ರೈತರು ಒಂದು ದಾರಿಯಲ್ಲಿ ಕನಿಷ್ಠ 25 ವರ್ಷದಿಂದ ಬಳಸುತ್ತಿದ್ದಾರೆ ಇದನ್ನು ವಹಿವಾಟ ದಾರಿಯನ್ನು ಕಾಯಂಗೊಳಿಸಬೇಕೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿದರು. ತಹಶೀಲ್ದಾರರು ಸರ್ಕಾರದ ಸುತ್ತೋಲೆ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ.

ರಾಜ್ಯದಲ್ಲಿ ರೈತರ ದಾರಿ ಸಮಸ್ಯೆಯಾಗಿಯೇ ಉಳಿದಿದೆ ಆದ್ದರಿಂದ ಈ ದಾರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ದಾರಿ ಸಮಸ್ಯೆ ಇತ್ಯರ್ತಕ್ಕಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನು ಓದಿ: ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ವಿಶೇಷ ಸಚಿವ ಸಂಪುಟ ಸಭೆ ಕರೆದು ದಾರಿ ಸಮಸ್ಯೆ ಇತ್ಯಕ್ಕಾಗಿ ಕಾನೂನು ತಿದ್ದುಪಡಿ ಮಾಡುವುದು ಹಾಗೂ ಗ್ರಾಮ ನಕ್ಷೆಗಳಲ್ಲಿ ದಾರಿ ಗುರುತು ಮಾಡಬೇಕೆಂದು ಮನವಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪ್ರಭುಗೌಡ ಪೋತರೆಡ್ಡಿ ರೈತರ ಮುಖಂಡರು ಹಾಗೂ ಜಯ ಕರ್ನಾಟಕ ಸಂಘಟನೆ ಹುಣಸಗಿ ತಾಲೂಕು ಅಧ್ಯಕ್ಷ ಟೋಪಣ್ಣ ಹಳ್ಳಿ ಸಾಗರ್, ಜಯ ಕರ್ನಾಟಕ ಸಂಘಟನೆ ಶಹಾಪುರದ ದಾವಲ್ ಸಾಬ್ ಗೂಗಿ, ಬಾಲಚಂದ್ರ ಚೌಹಾನ್, ಮಹಾಂತೇಶ್ ಪವಾರ್ ಇದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ