ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

Ad
Ad

ಇಳಕಲ್: ಭಾವಸಾರ ಕ್ಷತ್ರೀಯ ಸಮಾಜದಿಂದ
ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘ ನಿ, ಇಲಕಲ್ಲ ಇದರ ಉದ್ಘಾಟನಾ ಹಾಗೂ ನಿರ್ದೇಶಕ ಮಂಡಳಿಯ ಪದಗ್ರಹಣ ಸಮಾರಂಭ ನಗರದ ಶ್ರೀ ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾ ಭವನದಲ್ಲಿ ನೆರವೇರಿತು.

Ad
Ad

ದಿವ್ಯ ಸಾನಿಧ್ಯ ವಹಿಸಿದ್ದ ಸದ್ಗುರು ಶ್ರೀ ಹ.ಬ.ಪ ಪ್ರಭಾಕರದಾದಾ ಬೋದಲೆ ಮಹಾರಾಜ
ಶ್ರೀ ಕ್ಷೇತ್ರ ಪಂಢರಪುರ – ಬಾಗಲಕೋಟ, ಸಮಾಜದ ಹಿರಿಯರಾದ ಪಲ್ಲಾದರಾವ್ ಮಹೇಂದ್ರಕರ, ದಿಲೀಪ ದೇವಗಿರಿಕರ, ಲಕ್ಷ್ಮಣ್ ಮಹೇಂದಕರ, ನಾರಾಯಣರಾವ ಅಂಬೋರೆ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಎರೆದು, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಶಾಂತ್ ಹಂಚಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಮಾಜದ ಹಿರಿಯರಾದ ದಿಲೀಪ್ ದೇವಗೀರಕರ್ ಅವರು ಮಾತನಾಡಿ, ಸಮಾಜದಹಿರಿಯರ ಬಹುದಿನಗಳ ಕನಸು ಇಂದು ಈ ಯುವಕರ ಮೂಲಕ ಸಕಾರಗೊಂಡಿದೆ. ಸಮಾಜ ಬಾಂಧವರು ಈ ಸರ್ಕಾರಿ ಸಂಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಉದ್ಯೋಗ ವ್ಯಾಪಾರಗಳನ್ನು ಬಲಪಡಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ರು.

ಇದನ್ನು ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಸದ್ಗುರು ಪ್ರಭಾಕರ್ ದಾದಾ ಬೋಧಲೆ ಮಹಾರಾಜ್ ಅವರು ಆಶೀರ್ವಚನ ನೀಡಿ, ಈ ಮೊದಲಿಗಿಂತಲೂ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆದಿದೆ. ಈಗಿನ ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡುವ ಅವಶ್ಯಕತೆ ಇದೆ. ಅಜವಾದಾರಿಯನ್ನು ತಂದೆ ತಾಯಿಯರು ಹಿರಿಯರು ನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಸಮಾಜ ತಲೆತಗ್ಗಿಸುವಂತಹ ಕೆಲಸ ಆಗಬಾರದು. ಈಗ ನಾನು ಉದ್ಘಾಟಿಸಿರುವ ಈ ಪತ್ತಿನ ಸಹಕಾರಿ ಸಂಘ ಮುಂದೊಂದು ದಿನ ಹೆಮ್ಮೆರವಾಗಿ ಬೆಳೆಯುತ್ತಿದೆ ಎಂಬ ನಂಬಿಕೆ ನನಗಿದೆ, ಮುಂದೊಂದು ದಿನ ಈ ಸಹಕಾರಿ ಸಂಘ ಬ್ಯಾಂಕ್ ಆಗಿ ಪರಿವರ್ತನೆ ಯಾಗುವುದನ್ನು ನಾನು ನೋಡಲಿದ್ದೇನೆ ಎಂದು ಭವಿಷ್ಯ ನುಡಿದರು.

ಅಲ್ಲದೆ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸೌಜನ್ಯಪೂರ್ವಕವಾಗಿ ಪತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಆಶೀರ್ವದಿಸಿದ್ದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪೂಜ್ಯರು ಹಾಗೂ ಸಮಾಜದ ಹಿರಿಯರು ಗೌರವಿಸಿ ಸಕರಿಸಿದ್ದರು.

ಆಡಳಿತ ಮಂಡಳಿ ವತಿಯಿಂದ ವೇದಿಕೆ ಮೇಲಿದ್ದ ಗಣ್ಯರ ಸಮ್ಮುಖದಲ್ಲಿ ಶೇರುದಾರರಿಗೆ ಶೇರು ಪತ್ರ ಹಾಗೂ ಖಾತೆದಾರರಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು.

ನೂತನ ಆಡಳಿತ ಮಂಡಳಿ ವತಿಯಿಂದ ಸಮಾಜದ ಗುರುಗಳು ಹಾಗೂ ಸಮಾಜದ ಹಿರಿಯರಿಗೆ ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪ್ರಶಾಂತಕುಮಾರ ಹಂಚಾಟೆ, ಉಪಾಧ್ಯಕ್ಷ ಸುನೀಲಕುಮಾರ ದೇವಗಿರಿಕರ, ನಿರ್ದೇಶಕರಾದ
ಪ್ರಕಾಶ ದೇವಗಿರಿಕರ, ರಮೇಶ್ ಹಂಚಾಟೆ, ಜಮದಗ್ನಿ ಮಹೇಂದ್ರಕರ, ಲಕ್ಷಣ ದಾಯಮಲೆ, ರಾಮಚಂದ್ರ ಕಠಾರೆ, ಸಂತೋಷ ದೇವಗಿರಿಕರ,
ಭಾಗ್ಯಶ್ರೀ ಹಂಚಾಟೆ, ರೇಣುಕಾ ದೇವಗಿರಿಕರ, ಗೀತಾಬಾಯಿ ಲೋಕರೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಸಮಾಜದ ಹಿರಿಯರು, ಯುವಕರು, ಪ್ರಮುಖರು ಪಾಲ್ಗೊಂಡಿದ್ದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500