ನನ್ನ ಹಾಗೂ ಸಿಎಂನ ಜೈಲಿಗೆ ಕಳಿಸಲು ಕುತಂತ್ರ: ಡಿಕೆ ಶಿವಕುಮಾರ್ ಗಂಭೀರ ಆರೋಪ

ನನ್ನ ಹಾಗೂ ಸಿಎಂನ ಜೈಲಿಗೆ ಕಳಿಸಲು ಕುತಂತ್ರ: ಡಿಕೆ ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಜೈಲಿಗೆ ಕಳುಹಿಸಲೇಬೇಕು ಎಂದು ಕುತಂತ್ರ ಹೆಣೆಯಲಾಗುತ್ತಿದ್ದು, ನಾನೂ ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗಂಭೀರ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏನೂ ಇಶ್ಯು ಇಲ್ಲದೇ ಇವರು ಸಿಎಂ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ದೋಸ್ತಿ ನಾಯಕರ ಪಾದಯಾತ್ರೆ ಬಗ್ಗೆ ಕುಟುಕಿದ ಡಿಕೆಶಿ ಅವರು, ಪಾದಯಾತ್ರೆಯಲ್ಲಿ ಏನಾದ್ರೂ ಸದ್ದು ಇದೆಯಾ?.. ಸುಮ್ಮನೇ ಹೋಗ್ತಾ ಇದ್ದಾರೆ. ಸಿಎಂ ಹಾಗೂ ನನ್ನ ವಿರುದ್ಧ ದಾಖಲೆಗಳಿಲ್ಲದೇ ವಿಪಕ್ಷದವರು ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಅವರ ಕುಟುಂಬದ ರಕ್ಷಣೆಗೆ ಅವರು,
(ದೇವೇಗೌಡರು) ಹೋಗಲೇ ಬೇಕಲ್ಲವಾ? ಅಷ್ಟೇ ಅಲ್ಲದೆ, ನಮ್ಮ ವಿರುದ್ಧ ಪಟ್ಟಿ ಕೊಡುವುದಕ್ಕೆ ಹೋಗಿರಬಹುದು ಎಂದು ವ್ಯಂಗ್ಯವಾಡಿದರು.

ದೇವೇಗೌಡರ ಕುಟುಂಬದ ದಾಖಲೆ ಬಿಚ್ಚಿಡುವ ಕೆಲಸ ಮಾಡಲೇಬೇಕಾಗುತ್ತದೆ. ಇದಕ್ಕೆಲ್ಲ ಒಳ್ಳೆಯ ಸಮಯ, ಮುಹೂರ್ತ ಬೇಕು. ಶುಭ ವಾರ, ಶುಭ ನಕ್ಷತ್ರ ನೋಡಬೇಕಾಗುತ್ತದೆ. ಮೊದಲು ಅವರಿಗೆ ಹೇಳಿದ್ದೇವೆ, ನಮ್ಮದೇನಜದೆ ಬಿಚ್ಚಿಡಿ, ನಿಮ್ಮದು ಬಿಚ್ಚಿ. ಟಿವಿಯಲ್ಲಿ ಬೇಡ, ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು