ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: “ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ” ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಪ್ರಾರಂಭದಲ್ಲೇ ನಾನು ಹೇಳಿದ್ದೆ. ಮಳೆ, ಗಾಳಿ, ಗುಡುಗು ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಅವಾಂತರ ಸೃಷ್ಟಿಸಲಿದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳು ಆಗುತ್ತವೆ ಎಂದು ಮೊದಲೇ ಹೇಳಿದ್ದೆ. ಅಲ್ಲದೇ ಜನ ಅಶಾಂತಿಯಿಂದ ಇರುತ್ತಾರೆ ಎಂದು ತಿಳಿಸಿದ್ದೆ ಎಂದು ಕೋಡಿ ಶ್ರೀಗಳು ಹೇಳಿದರು.

ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದೂ ಹೇಳಿದ್ದೆ. ಅದರಂತೆ ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಎಚ್ಚರಿಕೆ ಕೂಡ ನೀಡಿದ್ದೆ ಎಂದರು.
ಈಗಲೂ ಅಂತಹ ಪರಿಸ್ಥಿತಿ ಇದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಲಿದೆ ಎಂದು ಶ್ರೀಗಳು ಹೇಳಿದರು.

ಸಂವತ್ಸರದ ಕಡೆಯವರೆಗೂ ರಾಜ್ಯದಲ್ಲಿ ತೊಂದರೆ ಇರಲಿವೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಕೂಡ ಆಗುತ್ತದೆ ಕಾದು ನೋಡಿ. ಅಲ್ಲದೇ ಬೆಂಕಿಯಿಂದ ಹೆಚ್ಚು ಸಮಸ್ಯೆ ಉಂಟಾಗಲಿದೆ. ಅಪಮೃತ್ಯು ಹೆಚ್ಚಾಗಲಿದೆ. ರಾಜ್ಯದಲ್ಲಿ ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಇದರಿಂದ ರಾಜ್ಯಾದ್ಯಂತ ಅಶಾಂತಿ ಹೆಚ್ಚಾಗಲಿವೆ ಎಂದರು.

ಒಂದೆಡೆ ಪ್ರಕೃತಿ ವಿಕೋಪ, ಮತ್ತೊಂದೆತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗುವುದಿಲ್ಲ, ಬದಲಾಗಿ ಅಶುಭ ಆಗುತ್ತದೆ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳು ಆಗುತ್ತವೆ. ಗುಡ್ಡಗಳು ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ ಎಂದರು.

Latest News

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಭಾರತ ಒಂದಾಗಿ ಉಳಿಯಲು ಮಾನವ ಧರ್ಮದ ಪರವಾಗಿ ಅಂಬೇಡ್ಕರ್ ಧ್ವನಿ ಎತ್ತಿದ್ದಾರೆ.ಅಂಬೇಡ್ಕರ್ ಅವರ ಬದುಕು ಪ್ರತಿ ದಿನ ಅಭ್ಯಾಸ ಮಾಡುವಂತಹದ್ದಾಗಿದೆ.ಅವರ ಚಿಂತನೆಗಳನ್ನು ಓದಬೇಕಿದೆ.ಒಂದು ದಿನದ ಆಚರಣೆ ಆಗಬಾರದು.ನಾವೆಲ್ಲರೂ