ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: “ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ” ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಪ್ರಾರಂಭದಲ್ಲೇ ನಾನು ಹೇಳಿದ್ದೆ. ಮಳೆ, ಗಾಳಿ, ಗುಡುಗು ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಅವಾಂತರ ಸೃಷ್ಟಿಸಲಿದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳು ಆಗುತ್ತವೆ ಎಂದು ಮೊದಲೇ ಹೇಳಿದ್ದೆ. ಅಲ್ಲದೇ ಜನ ಅಶಾಂತಿಯಿಂದ ಇರುತ್ತಾರೆ ಎಂದು ತಿಳಿಸಿದ್ದೆ ಎಂದು ಕೋಡಿ ಶ್ರೀಗಳು ಹೇಳಿದರು.

ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದೂ ಹೇಳಿದ್ದೆ. ಅದರಂತೆ ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಎಚ್ಚರಿಕೆ ಕೂಡ ನೀಡಿದ್ದೆ ಎಂದರು.
ಈಗಲೂ ಅಂತಹ ಪರಿಸ್ಥಿತಿ ಇದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಲಿದೆ ಎಂದು ಶ್ರೀಗಳು ಹೇಳಿದರು.

ಸಂವತ್ಸರದ ಕಡೆಯವರೆಗೂ ರಾಜ್ಯದಲ್ಲಿ ತೊಂದರೆ ಇರಲಿವೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಕೂಡ ಆಗುತ್ತದೆ ಕಾದು ನೋಡಿ. ಅಲ್ಲದೇ ಬೆಂಕಿಯಿಂದ ಹೆಚ್ಚು ಸಮಸ್ಯೆ ಉಂಟಾಗಲಿದೆ. ಅಪಮೃತ್ಯು ಹೆಚ್ಚಾಗಲಿದೆ. ರಾಜ್ಯದಲ್ಲಿ ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಇದರಿಂದ ರಾಜ್ಯಾದ್ಯಂತ ಅಶಾಂತಿ ಹೆಚ್ಚಾಗಲಿವೆ ಎಂದರು.

ಒಂದೆಡೆ ಪ್ರಕೃತಿ ವಿಕೋಪ, ಮತ್ತೊಂದೆತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗುವುದಿಲ್ಲ, ಬದಲಾಗಿ ಅಶುಭ ಆಗುತ್ತದೆ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳು ಆಗುತ್ತವೆ. ಗುಡ್ಡಗಳು ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ ಎಂದರು.

Latest News

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಈ ಯುದ್ಧ ನಡೆಯಬೇಕಾದ ಅವಶ್ಯಕತೆ ಇರಲಿಲ್ಲ.ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥನೆ ಮಾಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಉರ್ದು ಶಾಲೆ ಆವರಣದಲ್ಲಿ ಶುಕ್ರವಾರ ದೇವಿಕಾ ಸುಬ್ಬರಾವ್ ಫೌಂಡೇಶನ್‌ದಿAದ ರಂಜಾನ್ ಹಬ್ಬದ ನಿಮಿತ್ಯ ಆಯೋಜನೆ ಮಾಡಿದ್ದ ಇಫ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಮಾನವೀಯ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ ಮಾ.9 ರಂದು ಸಾಯಂಕಾಲ 5ಗಂಟೆಗೆ ಪಟ್ಟಣದ ಮಹಾಂತೇಶ ನಗರದ ಗಣೇಶ ಗುಡಿ ಹತ್ತಿರದಲ್ಲಿರುವ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಶಾಲೆಯ ಗೌರವಾಧ್ಯಕ್ಷ ವೇ.ಸಂಗಯ್ಯ ಹಾಲಗಂಗಾಧರಮಠ ವಹಿಸುವರು.ವೈದ್ಯರಾದ ಡಾ.ಚಂದ್ರಶೇಖರ ಶಿವಯೋಗಿಮಠ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಹುಲ್ಲೂರ ಎಸ್.ಎನ್.ಡಿ ನ್ಯಾಶನಲ್