ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: “ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ” ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಪ್ರಾರಂಭದಲ್ಲೇ ನಾನು ಹೇಳಿದ್ದೆ. ಮಳೆ, ಗಾಳಿ, ಗುಡುಗು ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಅವಾಂತರ ಸೃಷ್ಟಿಸಲಿದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳು ಆಗುತ್ತವೆ ಎಂದು ಮೊದಲೇ ಹೇಳಿದ್ದೆ. ಅಲ್ಲದೇ ಜನ ಅಶಾಂತಿಯಿಂದ ಇರುತ್ತಾರೆ ಎಂದು ತಿಳಿಸಿದ್ದೆ ಎಂದು ಕೋಡಿ ಶ್ರೀಗಳು ಹೇಳಿದರು.

ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದೂ ಹೇಳಿದ್ದೆ. ಅದರಂತೆ ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಎಚ್ಚರಿಕೆ ಕೂಡ ನೀಡಿದ್ದೆ ಎಂದರು.
ಈಗಲೂ ಅಂತಹ ಪರಿಸ್ಥಿತಿ ಇದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಲಿದೆ ಎಂದು ಶ್ರೀಗಳು ಹೇಳಿದರು.

ಸಂವತ್ಸರದ ಕಡೆಯವರೆಗೂ ರಾಜ್ಯದಲ್ಲಿ ತೊಂದರೆ ಇರಲಿವೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಕೂಡ ಆಗುತ್ತದೆ ಕಾದು ನೋಡಿ. ಅಲ್ಲದೇ ಬೆಂಕಿಯಿಂದ ಹೆಚ್ಚು ಸಮಸ್ಯೆ ಉಂಟಾಗಲಿದೆ. ಅಪಮೃತ್ಯು ಹೆಚ್ಚಾಗಲಿದೆ. ರಾಜ್ಯದಲ್ಲಿ ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಇದರಿಂದ ರಾಜ್ಯಾದ್ಯಂತ ಅಶಾಂತಿ ಹೆಚ್ಚಾಗಲಿವೆ ಎಂದರು.

ಒಂದೆಡೆ ಪ್ರಕೃತಿ ವಿಕೋಪ, ಮತ್ತೊಂದೆತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗುವುದಿಲ್ಲ, ಬದಲಾಗಿ ಅಶುಭ ಆಗುತ್ತದೆ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳು ಆಗುತ್ತವೆ. ಗುಡ್ಡಗಳು ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ ಎಂದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ