ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಮುದ್ದೇಬಿಹಾಳ : ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ (job fair) ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು.

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮೇಳದ ಮಾಹಿತಿ ನೀಡಿದರು.

Join Our Telegram: https://t.me/dcgkannada

ಬೆಂಗಳೂರು, ಮೈಸೂರು ಮೊದಲಾದ ಮಹಾನಗರಗಳಲ್ಲಿ ಆಯಾ ಕಾಲೇಜು, ಶಿಕ್ಷಣ ಸಂಸ್ಥೆಗಳು ತಮ್ಮ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿವೆ. ಆದರೆ ಅವುಗಳು ಉತ್ತರ ಕರ್ನಾಟಕ ಭಾಗದಲ್ಲಿರುವ ಕಾಲೇಜುಗಳಲ್ಲಿ ಮೇಳಗಳನ್ನು ಆಯೋಜಿಸುವುದಿಲ್ಲ. ಇದನ್ನು ಮನಗಂಡು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಉತ್ತಮ ಕೆಲಸ ದೊರೆಯಬೇಕು ಎಂಬ ಉದ್ದೇಶದಿಂದ ಈ ಮೇಳವನ್ನು (job fair) ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ,ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.ದೇಶದ ಪ್ರಮುಖ ಕಂಪನಿಗಳಾದ ಟಾಟಾ, ಹೋಂಡಾ, ಮಾರ್ಕಪೋಲೋ, ಟೋಯೋಟಾ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಎಂದು ತಿಳಿಸಿದರು.

ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಸುಮಾರು 1500 ಉದ್ಯೋಗಗಳು ಖಾಲಿ ಇದ್ದು ಅವುಗಳ ಭರ್ತಿಗೆ ಮೇಳದಲ್ಲಿ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಸಂದರ್ಶನ, ಆಯ್ಕೆಯಾದವರಿಗೆ ಉದ್ಯೋಗಪತ್ರ ವಿತರಿಸಲಿದ್ದಾರೆ. ಈಗಾಗಲೇ ರಾಜ್ಯದ 110 ಸ್ಥಳಗಳಲ್ಲಿ ಉದ್ಯೋಗ ಮೇಳ ನಡೆಸಲಾಗಿದ್ದು 40 ಸಾವಿರಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ಮುದ್ದೇಬಿಹಾಳದ ಮೇಳಕ್ಕೆ (job fair) 300ಕ್ಕೂ ಹೆಚ್ಚು ಜನ ಹೆಸರು ನೋಂದಾಯಿಸಿದ್ದಾರೆ ಎಂದರು.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಮಾತನಾಡಿ, ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಅತೀ ದೊಡ್ಡ ಉದ್ಯೋಗ ಮೇಳ ಇದಾಗಿದ್ದು ಗಂಗಮ್ಮನವರ ಆಶೀರ್ವಾದದಿಂದ ಇಂದು ಸಾವಿರಾರು ವಿದ್ಯಾರ್ಥಿಗಳು ದೇಶದ ಹಲವು ಕಡೆಗಳಲ್ಲಿ ಒಳ್ಳೆಯ ಉದ್ಯೋಗಗಳಲ್ಲಿದ್ದಾರೆ. ಉದ್ಯೋಗ ಮೇಳಕ್ಕೆ 3000ಕ್ಕೂ ಅಧಿಕ ಜನ ಬರುವ ಸಾಧ್ಯತೆ ಇದೆ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವರು ಮೊ.7829529043, ಪ್ರಾಚಾರ್ಯ ಎಸ್.ಎನ್.ಪೊಲೇಶಿ 9035103184ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಶಿವರಾಜ ತಡಸದ,ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪ್ರೊ.ಎಂ.ಆಯ್.ಬಿರಾದಾರ,ಎ.ಎ.ಮುಲ್ಲಾ, ರಹೀಂ ಮುಲ್ಲಾ, ಶ್ರೀಶೈಲ ಹತ್ತಿ, ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಮೊದಲಾದವರು ಇದ್ದರು.

ಈಗಾಗಲೇ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಗಿನ ಕ್ಯೂ ಆರ್ ಕೋಡ್ ಬಳಸಿ…

ಉದ್ಘಾಟನೆ :ಉದ್ಯೋಗ ಮೇಳದ ಉದ್ಘಾಟನೆ ಆ.14 ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಮೇಳದ ಉದ್ಘಾಟನೆ ಹಮ್ಮಿಕೊಳ್ಳಲಾಗಿದ್ದು, ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀ ದಿವ್ಯ ಸಾನಿಧ್ಯ ವಹಿಸುವರು. ಶಾಸಕ, ಕೆ.ಎಸ್.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಎಸ್.ಜಿ.ವಿ.ಸಿ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ,ಟ್ರಸ್ಟ್ ಸದಸ್ಯರಾದ ಜಯಲಕ್ಷ್ಮಿ ಬಗಲಿ, ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ