ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ಲಿಂಗಸೂಗೂರು: ತಾಲೂಕಿನ ಬೆಂಡೋಣಿ ಗ್ರಾಮದ ಮಾಜಿ ಸೈನಿಕರಾದ ಯಲ್ಲಪ್ಪ ಹಲ್ಕಾವಟಗಿಯವರ ಪುತ್ರ ತೇಜಸ್ವಿ (24) ಆಗಸ್ಟ್ 6 ರಂದು ನಾರಾಯಣಪುರ ಚೆಕ್ ಪೋಸ್ಟ್ ಬಳಿಯ ಎಡದಂಡೆ ಕಾಲುವೆಗೆ (narayanpur canal) ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಇಂದು ಕೊಡೆಕಲ್ ದ ಬೂದಿಹಾಳ ಸೇತುವೆ ಹತ್ತಿರ ಯುವಕ ಶವವಾಗಿ ಪತ್ತೆಯಾದ ಪ್ರಕರಣ ನಡೆದಿದೆ.

Join Our Telegram: https://t.me/dcgkannada

ಲಿಂಗಸಗೂರು ಪಟ್ಟಣದ ಸಂಗಮೇಶ್ವರ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಮೃತ ಯುವಕ ತೇಜಸ್ವಿ ತನ್ನ ಸ್ನೇಹಿತನ ಜೊತೆ ಆಲಮಟ್ಟಿ ಹೋಗಿ ಮರಳಿ ಬರುವ ಸಮಯದಲ್ಲಿ ಮುಖ ತೊಳೆಯಲು ಎಂದು ನಾರಾಯಣಪುರ ಕ್ರಾಸ್ ಬಳಿಯ ಎಡದಂಡೆ ಕಾಲುವೆ (narayanpur canal) ಗೆ ಇಳಿದಾಗ ಕಾಲು ಜಾರಿ ಕಾಲುವೆಗೆ ಬಿದ್ದಿದ್ದು,ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ಅಸಹಕಾರ: ಕಾಲುವೆಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ನಾರಾಯಣಪುರ ಪೋಲೀಸ್ ಠಾಣೆ ಗೆ ಮಾಹಿತಿ ನೀಡಲು ಹೋದಾಗ ಈ ಘಟನೆ ನಮ್ಮ ವ್ಯಾಪ್ತಿಗೆ ಬರಲ್ಲ, ನಾಲತವಾಡ ಪೋಲಿಸ್ ಠಾಣೆ ವ್ಯಾಪ್ತಿಗೆ ಬರುತ್ತೆ ಎಂದು ಹೇಳಿದ್ದಾರೆ.

ನಂತರ ನಾಲತವಾಡ ಪೋಲಿಸ್ ಠಾಣೆಗೆ ತೆರಳಿ ಮಾಹಿತಿ ನೀಡಿದರೆ ಅವರು ಎಡದಂಡೆ ಕಾಲುವೆ (narayanpur canal) 100 ಮೀ ವ್ಯಾಪ್ತಿ ಬರುತ್ತೆ, ನೀವೂ ಮುದ್ದೇಬಿಹಾಳ ಠಾಣೆ ಬರುತ್ತೆ ಎಂದು ಹೇಳುವ ಮೂಲಕ ಪೋಲಿಸರು ಅಸಹಕಾರ ತೋರಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಶವ ಪತ್ತೆಯಾದ ತಕ್ಷಣ ಸ್ಥಳಕ್ಕೆ ಕೊಡೆಕಲ್ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಮರಣೋತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದು ಅಂತ್ಯಕ್ರೀಯೆ ಇಂದು ಸಾಯಂಕಾಲ ಬೆಂಡೋಣಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತನ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು