ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ಲಿಂಗಸೂಗೂರು: ತಾಲೂಕಿನ ಬೆಂಡೋಣಿ ಗ್ರಾಮದ ಮಾಜಿ ಸೈನಿಕರಾದ ಯಲ್ಲಪ್ಪ ಹಲ್ಕಾವಟಗಿಯವರ ಪುತ್ರ ತೇಜಸ್ವಿ (24) ಆಗಸ್ಟ್ 6 ರಂದು ನಾರಾಯಣಪುರ ಚೆಕ್ ಪೋಸ್ಟ್ ಬಳಿಯ ಎಡದಂಡೆ ಕಾಲುವೆಗೆ (narayanpur canal) ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಇಂದು ಕೊಡೆಕಲ್ ದ ಬೂದಿಹಾಳ ಸೇತುವೆ ಹತ್ತಿರ ಯುವಕ ಶವವಾಗಿ ಪತ್ತೆಯಾದ ಪ್ರಕರಣ ನಡೆದಿದೆ.

Join Our Telegram: https://t.me/dcgkannada

ಲಿಂಗಸಗೂರು ಪಟ್ಟಣದ ಸಂಗಮೇಶ್ವರ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಮೃತ ಯುವಕ ತೇಜಸ್ವಿ ತನ್ನ ಸ್ನೇಹಿತನ ಜೊತೆ ಆಲಮಟ್ಟಿ ಹೋಗಿ ಮರಳಿ ಬರುವ ಸಮಯದಲ್ಲಿ ಮುಖ ತೊಳೆಯಲು ಎಂದು ನಾರಾಯಣಪುರ ಕ್ರಾಸ್ ಬಳಿಯ ಎಡದಂಡೆ ಕಾಲುವೆ (narayanpur canal) ಗೆ ಇಳಿದಾಗ ಕಾಲು ಜಾರಿ ಕಾಲುವೆಗೆ ಬಿದ್ದಿದ್ದು,ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ಅಸಹಕಾರ: ಕಾಲುವೆಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ನಾರಾಯಣಪುರ ಪೋಲೀಸ್ ಠಾಣೆ ಗೆ ಮಾಹಿತಿ ನೀಡಲು ಹೋದಾಗ ಈ ಘಟನೆ ನಮ್ಮ ವ್ಯಾಪ್ತಿಗೆ ಬರಲ್ಲ, ನಾಲತವಾಡ ಪೋಲಿಸ್ ಠಾಣೆ ವ್ಯಾಪ್ತಿಗೆ ಬರುತ್ತೆ ಎಂದು ಹೇಳಿದ್ದಾರೆ.

ನಂತರ ನಾಲತವಾಡ ಪೋಲಿಸ್ ಠಾಣೆಗೆ ತೆರಳಿ ಮಾಹಿತಿ ನೀಡಿದರೆ ಅವರು ಎಡದಂಡೆ ಕಾಲುವೆ (narayanpur canal) 100 ಮೀ ವ್ಯಾಪ್ತಿ ಬರುತ್ತೆ, ನೀವೂ ಮುದ್ದೇಬಿಹಾಳ ಠಾಣೆ ಬರುತ್ತೆ ಎಂದು ಹೇಳುವ ಮೂಲಕ ಪೋಲಿಸರು ಅಸಹಕಾರ ತೋರಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಶವ ಪತ್ತೆಯಾದ ತಕ್ಷಣ ಸ್ಥಳಕ್ಕೆ ಕೊಡೆಕಲ್ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಮರಣೋತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದು ಅಂತ್ಯಕ್ರೀಯೆ ಇಂದು ಸಾಯಂಕಾಲ ಬೆಂಡೋಣಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತನ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600