ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ಲಿಂಗಸೂಗೂರು: ತಾಲೂಕಿನ ಬೆಂಡೋಣಿ ಗ್ರಾಮದ ಮಾಜಿ ಸೈನಿಕರಾದ ಯಲ್ಲಪ್ಪ ಹಲ್ಕಾವಟಗಿಯವರ ಪುತ್ರ ತೇಜಸ್ವಿ (24) ಆಗಸ್ಟ್ 6 ರಂದು ನಾರಾಯಣಪುರ ಚೆಕ್ ಪೋಸ್ಟ್ ಬಳಿಯ ಎಡದಂಡೆ ಕಾಲುವೆಗೆ (narayanpur canal) ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಇಂದು ಕೊಡೆಕಲ್ ದ ಬೂದಿಹಾಳ ಸೇತುವೆ ಹತ್ತಿರ ಯುವಕ ಶವವಾಗಿ ಪತ್ತೆಯಾದ ಪ್ರಕರಣ ನಡೆದಿದೆ.

Join Our Telegram: https://t.me/dcgkannada

ಲಿಂಗಸಗೂರು ಪಟ್ಟಣದ ಸಂಗಮೇಶ್ವರ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಮೃತ ಯುವಕ ತೇಜಸ್ವಿ ತನ್ನ ಸ್ನೇಹಿತನ ಜೊತೆ ಆಲಮಟ್ಟಿ ಹೋಗಿ ಮರಳಿ ಬರುವ ಸಮಯದಲ್ಲಿ ಮುಖ ತೊಳೆಯಲು ಎಂದು ನಾರಾಯಣಪುರ ಕ್ರಾಸ್ ಬಳಿಯ ಎಡದಂಡೆ ಕಾಲುವೆ (narayanpur canal) ಗೆ ಇಳಿದಾಗ ಕಾಲು ಜಾರಿ ಕಾಲುವೆಗೆ ಬಿದ್ದಿದ್ದು,ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ಅಸಹಕಾರ: ಕಾಲುವೆಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ನಾರಾಯಣಪುರ ಪೋಲೀಸ್ ಠಾಣೆ ಗೆ ಮಾಹಿತಿ ನೀಡಲು ಹೋದಾಗ ಈ ಘಟನೆ ನಮ್ಮ ವ್ಯಾಪ್ತಿಗೆ ಬರಲ್ಲ, ನಾಲತವಾಡ ಪೋಲಿಸ್ ಠಾಣೆ ವ್ಯಾಪ್ತಿಗೆ ಬರುತ್ತೆ ಎಂದು ಹೇಳಿದ್ದಾರೆ.

ನಂತರ ನಾಲತವಾಡ ಪೋಲಿಸ್ ಠಾಣೆಗೆ ತೆರಳಿ ಮಾಹಿತಿ ನೀಡಿದರೆ ಅವರು ಎಡದಂಡೆ ಕಾಲುವೆ (narayanpur canal) 100 ಮೀ ವ್ಯಾಪ್ತಿ ಬರುತ್ತೆ, ನೀವೂ ಮುದ್ದೇಬಿಹಾಳ ಠಾಣೆ ಬರುತ್ತೆ ಎಂದು ಹೇಳುವ ಮೂಲಕ ಪೋಲಿಸರು ಅಸಹಕಾರ ತೋರಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಶವ ಪತ್ತೆಯಾದ ತಕ್ಷಣ ಸ್ಥಳಕ್ಕೆ ಕೊಡೆಕಲ್ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಮರಣೋತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದು ಅಂತ್ಯಕ್ರೀಯೆ ಇಂದು ಸಾಯಂಕಾಲ ಬೆಂಡೋಣಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತನ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು