ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ನಾರಾಯಣಪುರ ಕಾಲುವೆಗೆ ಕಾಲು ಜಾರಿ ಬಿದ್ದ ಮಾಜಿ ಯೋಧನ ಪುತ್ರ 4 ದಿನಗಳ ಬಳಿಕ ಶವವಾಗಿ ಪತ್ತೆ!

ಲಿಂಗಸೂಗೂರು: ತಾಲೂಕಿನ ಬೆಂಡೋಣಿ ಗ್ರಾಮದ ಮಾಜಿ ಸೈನಿಕರಾದ ಯಲ್ಲಪ್ಪ ಹಲ್ಕಾವಟಗಿಯವರ ಪುತ್ರ ತೇಜಸ್ವಿ (24) ಆಗಸ್ಟ್ 6 ರಂದು ನಾರಾಯಣಪುರ ಚೆಕ್ ಪೋಸ್ಟ್ ಬಳಿಯ ಎಡದಂಡೆ ಕಾಲುವೆಗೆ (narayanpur canal) ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಇಂದು ಕೊಡೆಕಲ್ ದ ಬೂದಿಹಾಳ ಸೇತುವೆ ಹತ್ತಿರ ಯುವಕ ಶವವಾಗಿ ಪತ್ತೆಯಾದ ಪ್ರಕರಣ ನಡೆದಿದೆ.

Join Our Telegram: https://t.me/dcgkannada

ಲಿಂಗಸಗೂರು ಪಟ್ಟಣದ ಸಂಗಮೇಶ್ವರ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಮೃತ ಯುವಕ ತೇಜಸ್ವಿ ತನ್ನ ಸ್ನೇಹಿತನ ಜೊತೆ ಆಲಮಟ್ಟಿ ಹೋಗಿ ಮರಳಿ ಬರುವ ಸಮಯದಲ್ಲಿ ಮುಖ ತೊಳೆಯಲು ಎಂದು ನಾರಾಯಣಪುರ ಕ್ರಾಸ್ ಬಳಿಯ ಎಡದಂಡೆ ಕಾಲುವೆ (narayanpur canal) ಗೆ ಇಳಿದಾಗ ಕಾಲು ಜಾರಿ ಕಾಲುವೆಗೆ ಬಿದ್ದಿದ್ದು,ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ಅಸಹಕಾರ: ಕಾಲುವೆಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳೀಯ ನಾರಾಯಣಪುರ ಪೋಲೀಸ್ ಠಾಣೆ ಗೆ ಮಾಹಿತಿ ನೀಡಲು ಹೋದಾಗ ಈ ಘಟನೆ ನಮ್ಮ ವ್ಯಾಪ್ತಿಗೆ ಬರಲ್ಲ, ನಾಲತವಾಡ ಪೋಲಿಸ್ ಠಾಣೆ ವ್ಯಾಪ್ತಿಗೆ ಬರುತ್ತೆ ಎಂದು ಹೇಳಿದ್ದಾರೆ.

ನಂತರ ನಾಲತವಾಡ ಪೋಲಿಸ್ ಠಾಣೆಗೆ ತೆರಳಿ ಮಾಹಿತಿ ನೀಡಿದರೆ ಅವರು ಎಡದಂಡೆ ಕಾಲುವೆ (narayanpur canal) 100 ಮೀ ವ್ಯಾಪ್ತಿ ಬರುತ್ತೆ, ನೀವೂ ಮುದ್ದೇಬಿಹಾಳ ಠಾಣೆ ಬರುತ್ತೆ ಎಂದು ಹೇಳುವ ಮೂಲಕ ಪೋಲಿಸರು ಅಸಹಕಾರ ತೋರಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಶವ ಪತ್ತೆಯಾದ ತಕ್ಷಣ ಸ್ಥಳಕ್ಕೆ ಕೊಡೆಕಲ್ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಮರಣೋತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದು ಅಂತ್ಯಕ್ರೀಯೆ ಇಂದು ಸಾಯಂಕಾಲ ಬೆಂಡೋಣಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತನ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ