ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!


ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ.

ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೂಲದ ಪ್ರಿಯಾಂಕಾ ಮೂರು ದಿನಗಳ ಹಿಂದೆಯಷ್ಟೇ ಮನೆ ಬಿಟ್ಟು ಪ್ರಿಯಕರನಿಗಾಗಿ ಬೆಳಗಾವಿಗೆ ಆಗಮಿಸಿದ್ದಾಳೆ. ಸದ್ಯ ರೋಹಿತ್, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಿಯಾಂಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದಹಾಗೇ, ಪ್ರಿಯಾಂಕಾಗೆ ಬೆಂಗಳೂರಲ್ಲಿ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರಂತೆ. ಆಕೆಯ ಪೋಷಕರು ಚಿಕ್ಕವಯಸ್ಸಿನಲ್ಲಿರುವಾಗಲೇ ಸಾವನ್ನಪ್ಪಿದ್ದು, ಸೋದರ ಮಾವನ ಆಶ್ರಯದಲ್ಲಿ ಬೆಳೆದಿದ್ದರಂತೆ.

ಇನ್ನು, ಶಿವಮೊಗ್ಗ ‌ಹಾಗೂ ಬೆಂಗಳೂರಲ್ಲಿ ಪ್ರಿಯಂಕಾ ತಂದೆ ಆಸ್ತಿ ಹೊಂದಿದ್ದು, ಪ್ರಿಯಾಂಕಾಗೆ 18 ವರ್ಷ ತುಂಬಿದ ಬಳಿಕ ಈ ಎಲ್ಲಾ ಆಸ್ತಿಗಳು ಪ್ರಿಯಂಕಾ ಹೆಸರಿಗೆ ವರ್ಗಾವಣೆಯಾಗಿದೆಯಂತೆ. ಆದರೆ ಸೋದರ ಮಾವನ ಕಿರಿಕಿರಿಗೆ ಬೇಸತ್ತು ಪ್ರಿಯಾಂಕಾ ಪ್ರಿಯಕರ ಮನೆಗೆ ಬಂದಿದ್ದರಂತೆ. ಆದರೆ ಪ್ರಿಯಾಂಕಾ-ರೋಹಿತ್ ಮದುವೆಯಾಗದಂತೆ ತಡೆಯಲು ಆಕೆಯ ಸಹೋದರ ಮಾವನ ಮಗ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮದುವೆ ಬಳಿಕ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸರಿಂದ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ಎಸ್​ಪಿ ನೀಡಿದ್ದಾರೆ.

ಇನ್ ಸ್ಟಾದಲ್ಲಿ ಪರಿಚಯ, ಲವ್ !
ಇನ್ನು, ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕಾ, ಇಂದು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನಲ್ಲಿ ರಕ್ಷಣೆ ಬೇಕು ಎಂದರೇ ಕಮಿಷನರ್ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ಮನೆಯಲ್ಲಿ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಅಲ್ಲಿಂದ ನಾನು ಬೆಳಗಾವಿಗೆ ಬಂದೇ, ಖಾನಾಪುರಕ್ಕೆ ಹೋಗಿ ಅಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇವು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಹಾಗೂ ರೋಹಿತ್ ಗೆ ಇನ್ ಸ್ಟಾದಲ್ಲಿ ಪರಿಚಯ ಆಗಿದ್ದು, ಮದುವೆ ನಿಮಿತ್ತ ಬೆಳಗಾವಿಗೆ ಬಂದ ವೇಳೆ ಆಕೆ ಆತನನ್ನು ಮೊದಲ ಬಾರಿಗೆ ಭೇಟಿ ಆಗಿದ್ದಳಂತೆ. ರೋಹಿತ್ ಮನೆಯವರ ಅಕ್ಕರೆ ಹಾಗೂ ಯುವಕನ ಪ್ರೀತಿಗೆ ಮೆಚ್ಚಿ ಆತನನ್ನೇ ಮದುವೆಯಾಗಬೇಕು ಅಂತ ನಿರ್ಧಾರ ಮಾಡಿದ್ದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಬೆಳಗಾವಿ ಎಸ್​ಪಿ ಹೇಳಿದ್ದೇನು?
ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಭೀಮಾಶಂಕರ ಗುಳೇದ್ ಅವರು, ಕಚೇರಿಗೆ ಯುವಕ-ಯುವತಿ ಆಗಮಿಸಿದ್ದರು. ಪ್ರೀತಿಸಿ ಮದುವೆಯಾಗಿದ್ದೇವೆ, ನಮಗೆ ಕಾನೂನು ರಕ್ಷಣೆ ಬೇಕು ಎಂದು ಮನವಿ ಮಾಡಿದ್ದರು. ಇದರಂತೆ ಖಾನಾಪುರ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಖಾನಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಕೆಯ ದಾಖಲೆಗಳು ಹಾಗೂ ಆಸ್ತಿ ವಿಚಾರದ ಬಗ್ಗೆ ದೂರು ನೀಡಿದ್ದರು. ಆ ವೇಳೆ ಸಂಬಂಧಿಗಳನ್ನು ಕರೆದು ಕೇಳಿದಾಗ ಅವರು ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದರಂತೆ. ಆದ್ದರಿಂದ ಯುವತಿಗೆ ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ಮತ್ತೊಮ್ಮೆ ದಾಖಲೆ ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಆಸ್ತಿ ವಿಚಾರ ಸಿವಿಲ್ ಕೇಸ್ ಆಗಿದ್ದು, ಕೋರ್ಟ್​ ಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿದ್ದೇವೆ ಎಂದು ವಿವರಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ