PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

ವಯನಾಡ್: ತೀವ್ರ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದ ನೂರಾರು ಜನರ ಸಾವಿಗೆ ಸಾಕ್ಷಿಯಾದ ಕೇರಳದ ವಯಾನಾಡುಗೆ 15 ದಿನಗಳ ಪ್ರಧಾನಿ ನರೇಂದ್ರ ಭೇಟಿ ನೀಡಿದ್ದು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ತೀವ್ರ ಭೂಕುಸಿತದಿಂದ ಸಾವು, ನೋವುಗಳಾಗಿ ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದರು, ಪ್ರಧಾನಿ ಮೋದಿ ಅವರು ವಯನಾಡುಗೆ ಭೇಟಿ ನೀಡದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಇಂದು ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕ್ಕೆ ಪ್ರದೇಶಗಳಿಗೆ ಮೋದಿ (PM modi) ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಇದೇ ವೇಳೆ ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ(PM modi) ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ.

ದುರಂತದಿಂದ ಆಪ್ತರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಭೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಂತರ ಮಾತನಾಡಿದ ಅವರು, ಸಾವಿರಾರು ಪರಿವಾರದ ಕನಸು ನುಚ್ಚುನೂರಾಗಿದೆ. ಪ್ರಕೃತಿ ರೌದ್ರ ರೂಪ ತೋರಿಸಿದೆ. ನಾನು ಆ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಜೊತೆಗೆ ಸಂತ್ರಸ್ತರ ಕೇಂದ್ರಗಳಿಗೂ ಭೇಟಿ ನೀಡಿ ಸಂತ್ರಸ್ತರಿಂದ ಎಲ್ಲಾ ವಿವರಗಳನ್ನು ಕೇಳಿದ್ದೇನೆ. ಆಸ್ಪತ್ರೆಯಲ್ಲೂ ಗಾಯಾಳುಗಳು ಕಷ್ಟದ ಪರಿಸ್ಥಿತಿಯನ್ನು ನೋಡಿದ್ದೇನೆ.

ನಮಗೆ ದುರ್ಘಟನೆಯಲ್ಲಿ ಮಡಿದ ಜನರನ್ನು ವಾಪಸ್ ತರಲು ಸಾಧ್ಯವಿಲ್ಲ. ಆದರೆ ಅಲ್ಲಿನ ಸಂತ್ರಸ್ತರಿಗೆ ಭವಿಷ್ಯಕ್ಕೆ ಸಹಾಯವನ್ನು ಮಾಡುತ್ತೇವೆ. ದೇಶ ಹಾಗೂ ಕೇಂದ್ರ ಸರ್ಕಾರ ಇಲ್ಲಿನ ಜನರ ಜೊತೆ ಇದ್ದೇವೆ. ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ.

ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ ಎಂದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು