Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ