Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್