Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ