Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ









ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ.

ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51 ನೇ ವಯಸ್ಸಿಗೆ ನಿಧನಹೊಂದಿದೆ. ಈ ಆಶ್ರಮಕ್ಕೆ 1971‌ ರಲ್ಲಿ ಶಿವಮೊಗ್ಗದ ಸಕ್ರೆಬೈಲ್ ನಿಂದ ಕೇವಲ 6 ನೇ ವಯಸ್ಸಿನಲ್ಲಿ ಆನೆಯನ್ನು ತರಲಾಗಿತ್ತು.‌ ಬೇಡಕಿಹಾಳ ಗ್ರಾಮದ ಸಂದೀಪ್ ಪೊಲೀಸ್ ಪಾಟೀಲ್ ಎಂಬುವವರು ತೋಟದಲ್ಲಿ ವಾಸವಿತ್ತು.

ಪ್ರಮುಖವಾಗಿ ಉಷಾರಾಣಿ ಆಣೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದ ಅನೇಕ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿತ್ತು. ಬೇಡಕಿಹಾಳದ ಶ್ರೀ ಕಲ್ಯಾಣ ಸಿದ್ಧೇಶ್ವರನ ಐತಿಹಾಸಿಕ ದಸರಾ ಹಬ್ಬ, ದೀಪಾವಳಿ ಮತ್ತು ಧೂಳವಡ ಪಲ್ಲಕಿ ಆಚರಣೆ ಸೇರಿದಂತೆ ಜೈನ ಸಮುದಾಯದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಕೇವಲ ಧಾರ್ಮಿಕ‌ ಕಾರ್ಯಕ್ರಮ ಮಾತ್ರವಲ್ಲದೆ ಚಲನಚಿತ್ರ ಹಾಗೂ ಧಾರಾವಾಹಿಯಲ್ಲಿಯೂ ಉಷಾರಾಣಿ ಗುರುತಿಸಿಕೊಂಡಿತ್ತು. ಸ್ವಾಮಿ ಸಮರ್ಥ ಚಲನಚಿತ್ರ, ಜಾನತಾ ರಾಜಾ ಮಹಾನಾಟ್ಯ, ರಾಜಶ್ರೀ ಛತ್ರಪತಿ ಶಾಹು ಮಹಾರಾಜರ ಧಾರಾವಾಹಿಯಲ್ಲಿ ಇದರ ಛಾಪು ಮೂಡಿಸಿತ್ತು.

ಆನೆಯ ನಿಧನಕ್ಕೆ ಶಾಂತಿಗಿರಿ ಟೆಸ್ಟಿನ ಶ್ರೀ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಮಾವುತ ಬಾಸು ಲಕ್ಷ್ಮೇಶ್ವರ ಸೇರಿದಂತೆ ಭಕ್ತರು ಅಂತಿಮ‌ ನಮನ ಸಲ್ಲಿಸಿದರು.

ಸಂಜೆ 6 ಗಂಟೆಯ ನಂತರ ಕ್ರೇನ್ ಮೂಲಕ ಅರಣ್ಯ ಇಲಾಖೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಹಾಕಿ ಬೆಡಕಿಹಾಳ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಅಂತಿಮ ಯಾತ್ರೆ ನಡೆಸಿ ಕೋಥಳಿ ಶಾಂತಿಗಿರಿಯ ಬೆಟ್ಟಕ್ಕೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಲಾಯಿತು.

ಚಿಕ್ಕೋಡಿ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಆನೆಯ ಮರನೋತ್ತರ ಪರೀಕ್ಷೆ ನಡಿಸಿದ ನಂತರ ಅಂತಿ ವಿಧಿ ವಿದಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ