TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

Ad
Ad


ಕೊಪ್ಪಳ: ತುಂಗಭದ್ರಾ ಜಲಾಶಯ (TB Dam) ಕ್ರಸ್ಟ್ ಗೇಟ್ ಕಿತ್ತು ಹೋದ ಹಿನ್ನಲೆ ಜಲಾಶಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ (DK SHIVAKUMAR) ನೀಡಿ ಪರಿಶೀಲಿಸಿದರು.

Ad
Ad

ತುಂಗಭದ್ರಾ ಜಲಾಶಯದಲ್ಲಿ ಮೇಲೆ ನಿಂತು ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಿನ್ನೆ ರಾತ್ರಿ ಜಲಾಶಯದ (TB Dam) 10 ಗೇಟ್ ಓಪನ್ ಇದ್ದವು. ಏಕಾಏಕಿ ಜಲಾಶಯದ 19 ನೇ ಗೇಟ್ ಡ್ಯಾಮೇಜ್ ಹಿನ್ನೆಲೆ ಎಲ್ಲಾ ಗೇಟ್ ಓಪನ್ ಮಾಡಿ ಪ್ರೆಶರ್ ಕಡಿಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು‌.

Join our Telegram: https://t.me/dcgkannada

ರಿಪೇರಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಅವರಿಗೆ ಈಗಾಗಲೇ ಡಿಸೈನ್ ನೀಡಲಾಗಿದೆ. ಇನ್ನು, ಕೂಡಲೇ ಕೆಲಸ ಮಾಡಲು ತಯಾರು ಮಾಡಲಾಗಿದೆ ಎಂದು ತಿಳಿಸಿದರು‌.

ಸದ್ಯ, ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೋರ ಹೋಗುತ್ತಿದೆ ಎಂದರು.

ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ. ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಹೀಗಾಗಿ, ‌ನೀರು ಹೊರಗಡೆ ಬಿಡಲಾಗ್ತಿದೆ. ಆ.13 ರಂದು ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಈಗ ಅದನ್ನು ಮುಂದೂಡಲಾಗಿದೆ ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಇದು (TB Dam) 60 ರಿಂದ 70 ವರ್ಷ ಹಳೆಯ ಜಲಾಶಯ. ಘಟನೆಗೆ ಸಂಬಂಧಿಸಿದಂತೆ
ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ ಡಿಸಿಎಂ ಡಿಕೆಶಿ ಹೇಳಿದರು.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು