Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ

Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ


ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣವೂ ಸೇರಿದಂತೆ ಪಕ್ಕದ ನಿಡಗುಂದಿ, ನಾಲತವಾಡ ಬಸ್ ನಿಲ್ದಾಣಗಳಲ್ಲಿ ಇಲಾಖೆಯ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಎರಡು ದಿನಗಳ ಕಾಲ ಸ್ವಚ್ಛತಾ ಅಭಿಯಾನ (Swachcha Bharath Abhiyan) ಹಮ್ಮಿಕೊಂಡಿರುವುದಾಗಿ ಸಾರಿಗೆ ಘಟಕ ವ್ಯವಸ್ಥಾಪಕ ಅಬೂಬಕರ್ ಮದಭಾವಿ ಹೇಳಿದರು.

Join Our Telegram: https://t.me/dcgkannada
ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ (Swachcha Bharath Abhiyan) ಚಾಲನೆ ನೀಡಿ ಅವರು ಮಾತನಾಡಿದರು.

ಬಸ್ ನಿಲ್ದಾಣ ನಮ್ಮ ಆಸ್ತಿ ಎಂಬುದು ಸಾರ್ವಜನಿಕರು ಅರಿತುಕೊಳ್ಳಬೇಕಿದೆ. ನಿಲ್ದಾಣದ ಕಂಬಗಳಿಗೆ ಎಲ್ಲೆಂದರಲ್ಲಿ ಭಿತ್ತಿಪತ್ರ ಅಂಟಿಸಿ ನಿಲ್ದಾಣದ ಅಂದವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದರು.

ಇದನ್ನೂ ಓದಿ: ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ


ಯುವ ಮುಖಂಡ ಉದಯ ರಾಯಚೂರ ಮಾತನಾಡಿ, ಸಾರಿಗೆ ಇಲಾಖೆಯ ಸಿಬ್ಬಂದಿಯೇ ಬಸ್ ನಿಲ್ದಾಣದ ಸ್ವಚ್ಛತೆ ಕೈಗೊಂಡಿರುವುದಕ್ಕೆ ಸಾರ್ವಜನಿಕರ ಪರವಾಗಿ ಧನ್ಯವಾದ ಹೇಳುತ್ತೇವೆ.ನಿಲ್ದಾಣಕ್ಕೆ ಬರುವವರು ಎಲ್ಲೆಂದರಲ್ಲಿ ಗುಟ್ಖಾ ಅಗೆದು ಉಗಿಯುವುದು, ಎಲ್ಲೆಂದರಲ್ಲಿ ಬಹಿರ್ದೆಸೆ, ಮೂತ್ರ ವಿಸರ್ಜನೆ ಮಾಡುವುದನ್ನು ಮಾಡಬಾರದು. ನಿಲ್ದಾಣದ ಸ್ವಚ್ಛತೆಗೆ ಯುವಕರು ಕೈಜೋಡಿಸಬೇಕು ಎಂದರು.


ಘಟಕದ ಎಡಿಎಂ ಸೂಪರವೈಸರ್ ಎಸ್.ಬಿ.ಪಾಟೀಲ್, ಎನ್.ಎಸ್.ಮಠ, ಬಸವರಾಜ ಬಿರಾದಾರ,ಎಸ್.ಡಿ.ಪತ್ತಾರ, ಎಸ್.ಎಂ.ಹೊಳಿ, ಎಸ್.ಆರ್.ಮುಲ್ಲಾ ಹಾಗೂ ಆಡಳಿತ ವರ್ಗ, ತಾಂತ್ರಿಕ ಸಿಬ್ಬಂದಿ, ಚಾಲಕ ನಿರ್ವಾಹಕ, ಸಿಬ್ಬಂದಿ ಪಾಲ್ಗೊಂಡಿದ್ದರು.

Latest News

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು. ಬೆಳಗ್ಗೆಯಿಂದಲೇ ಚಕ್ಕಡಿ,ಟ್ರಾö್ಯಕ್ಟರ್, ಜೀಪು,ಕಾರು,ಬೈಕುಗಳಲ್ಲಿ ತಮ್ಮ ಹೊಲಗಳಿಗೆ ತೆರಳಿದ ರೈತರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದರು.ಬಳಿಕ ವಿವಿಧ ಖಾದ್ಯಗಳನ್ನು ಚರಗದೂಟದಲ್ಲಿ ಸವಿದರು.ಜೋಳ,ಕಡಲೆ,ಕಬ್ಬು,ಸೂರ್ಯಕಾಂತಿ ಬೆಳೆಗಳು ಹೊಲದಲ್ಲಿದ್ದು ರೈತರು ತುಸು ಮಂದಹಾಸದಿAದ ಈ ವರ್ಷದ ಚರಗ ಚೆಲ್ಲಿದರು. ಮುದ್ದೇಬಿಹಾಳ ತಾಲ್ಲೂಕಿನ ಗೆದ್ದಲಮರಿಯ ರೈತ ಮಹದೇವಪ್ಪ ಕನ್ನೂರ ಅವರ ಹೊಲದಲ್ಲಿ ಅವರ ಸ್ನೇಹಿತರು, ಚರಗ ಚೆಲ್ಲಿದರು.ಪೊಲೀಸ್ ಇಲಾಖೆಯ ಪ್ರಕಾಶ ಪೂಜಾರಿ,

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ ಸಭೆಯಲ್ಲಿ ಸೇರಿದ್ದ ಸಾರ್ವಜನೀಕರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು. ಮಲಗಲದಿನ್ನಿ ಸಭೆಯಲ್ಲಿ ಪಿಡಿಓ ಮತ್ತು ಸಾರ್ವಜನೀಕರೊಂದಿಗೆ ನಡೆದ ವಾದ