Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.