Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Ad
Ad

Ad
Ad

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏತನ್ಮಧ್ಯೆ, ಕಂದಗನೂರು ಭಾಗದಲ್ಲಿ ಚಿರತೆ ಬಂದಿದೆ ಎಂಬ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಅವು ಈ ಭಾಗದ್ದಲ್ಲ ಎಂಬುದನ್ನು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.

ಕಾಡುಪ್ರಾಣಿ ಸೆರೆಗೆ ಬಿ.ಎಸ್.ಬೋಳಿ ಅವರ ಹೊಲದಲ್ಲಿ ಬೋನು ಇರಿಸಲಾಗಿದೆ. ಆದರೆ ಜು.30 ರಂದು ಮೃತಪಟ್ಟ ಆಕಳ ಮಾಂಸ ತಿನ್ನುವುದಕ್ಕೆ ಕಾಡುಪ್ರಾಣಿ ಬಂದು ಹೋಗಿದೆ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ತಿಳಿಸಿದ್ದಾರೆ.

ಹೊಲದಲ್ಲಿ ಮಂಗಳವಾರ ಅವಲೋಕಿಸಿದಾಗ ಕಾಡುಪ್ರಾಣಿಯ ಹೆಜ್ಜೆಗಳು ಚಿರತೆಯದ್ದೆಂಬಂತೆ ಕಾಣುತ್ತಿವೆ.ಆದರೆ ಖಚಿತವಾಗಿ ಹೇಳಲು ಆಗದು.ಕತ್ತೆ ಕಿರುಬ ಕೂಡಾ ಜಾನುವಾರುಗಳನ್ನು ತಿಂದು ಹೋಗುತ್ತದೆ. ಮೇಲಧಿಕಾರಿಗಳ ಸೂಚನೆಯಂತೆ ಕಾಡುಪ್ರಾಣಿ ಸೆರೆ ಹಿಡಿಯಲು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಸೆರೆಯಾದರೆ ಯಾವ ಪ್ರಾಣಿ ಎಂಬುದು ಖಚಿತವಾಗಿ ತಿಳಿದು ಬರಲಿದೆ ಎಂದು ಮಾಹಿತಿ ನೀಡಿದರು.

ಚಿರತೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋ ಫೋಟೊಗಳ ಮಾಹಿತಿಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡರು. ಸಂಜೆಯವ ಹೊತ್ತಿಗೆ ಚಿರತೆ ಕಂದಗನೂರಿನಲ್ಲಿ ಕಾಣಿಸಿದ್ದಲ್ಲ ಬೇರೆ ಸ್ಥಳದ್ದು ಎಂದು ಗೊತ್ತಾದ ಬಳಿಕ ಅಲ್ಪ ನಿರಾಳರಾಗಿದ್ದಾರೆ. ಆದರೆ, ಚಿರತೆಯೇ ಬಂದಿದೆ ಎಂಬುದನ್ನು ಯಾರೊಬ್ಬರು ನೋಡಿಲ್ಲ ಎಂದು ಗ್ರಾಮಸ್ಥ ರಾಜಾಭಕ್ಷಿ ಮಕಾಶಿ ತಿಳಿಸಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಗ್ರಾಮಸ್ಥರ ಹಿಂದೇಟು: ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಭೀತಿಗೊಳಗಾಗಿರುವ ಈ ಭಾಗದ ಕಂದಗನೂರು, ಕಾಳಗಿ, ಬಳಬಟ್ಟಿ ಗ್ರಾಮದ ರೈತಾಪಿ ವರ್ಗದವರಲ್ಲಿ ಕೃಷಿ ಚಟುವಟಿಕೆ ಗೆ ಹೋಗುವುದನ್ನು ಬಿಟ್ಟು ಮನೆಯಲ್ಲಿ ಕೂರುವಂತಾಗಿದೆ. ಆದಷ್ಟು ಬೇಗ ತಾಲ್ಲೂಕಾಡಳಿತದ ಅಧಿಕಾರಿಗಳು ಕಾಡುಪ್ರಾಣಿ ಪತ್ತೆ ಹಚ್ಚಿ ಸೆರೆ ಹಿಡಿದು ರೈತರಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Latest News

ತತಕ್ಷಣದಿಂದ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು

ತತಕ್ಷಣದಿಂದ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತೆ ಕುರಿತು ಕೇಂದ್ರ ಸಚಿವ ಸಂಪುಟ ಸಮಿತಿ

ಯುಪಿಎಸ್‌ಸಿ ಪರೀಕ್ಷೆ ಬರೆಯಲು ತಂದೆ-ತಾಯಿಯೇ ಸ್ಫೂರ್ತಿಪ್ರಾಥಮಿಕ ಶಾಲಾ ಶಿಕ್ಷಕನ ಪುತ್ರನಿಗೆ 462ನೇ ರ‍್ಯಾಂಕ್

ಯುಪಿಎಸ್‌ಸಿ ಪರೀಕ್ಷೆ ಬರೆಯಲು ತಂದೆ-ತಾಯಿಯೇ ಸ್ಫೂರ್ತಿಪ್ರಾಥಮಿಕ ಶಾಲಾ ಶಿಕ್ಷಕನ ಪುತ್ರನಿಗೆ 462ನೇ ರ‍್ಯಾಂಕ್

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಂದೆ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ, ತಾಯಿ ಗೃಹಿಣಿ. ವಾಸಿಸುವುದಕ್ಕೆ

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ ಢವಳಗಿ ಗ್ರಾಮದ ಶ್ರೀ ಬಸವ ಬಾಲ ಭಾರತಿ ಪ್ರಾಥಮಿಕ ಶಾಲೆಯನ್ನು ಸಂಸ್ಥೆಯ ಆಡಳಿತ ಮಂಡಳಿಯವರು ತಮ್ಮ ಸಂಬಂಧಿಕರನ್ನೇ ಕಾನೂನು ಬಾಹಿರವಾಗಿ ಸಂಸ್ಥೆಗೆ ನೇಮಕ ಮಾಡಿಕೊಂಡು ಶಾಲೆ ನಿರಂತರವಾಗಿ ನಡೆದಿದೆ ಎಂದು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಇಲಾಖೆಗೆ ನೀಡಿ ಅನುದಾನ ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ವಂಚಿಸಿದ್ದಾರೆ’ ಎಂದು ಹೋರಾಟಗಾರ, ವಕೀಲ ಚೇತನ ಶಿವಶಿಂಪಿ ದೂರಿದ್ದಾರೆ. ತಾಲ್ಲೂಕಿನ ಢವಳಗಿ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ ಪ್ರಮಾಣ ಪತ್ರವನ್ನೇ ತಿದ್ದುಪಡಿ ಮಾಡಿ ಅದರ ಆಧಾರದ ಮೇಲೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ಶಾಲೆಯ ಮಾನ್ಯತೆ ರದ್ದುಗೊಳಿಸುವಂತೆ ಕಿರುಕಳ ನೀಡುತ್ತಿರುವ ಹೋರಾಟಗಾರನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕಿನ ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಶನಿವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್