BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

Ad
Ad

Ad
Ad

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500