Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಕೊಪ್ಪಳ: ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra dam) 19ನೇ ಗೇಟ್‌ನ ಚೈನ್‌ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ.

ಏತನ್ಮಧ್ಯೆ, ಬೆಂಗಳೂರು, ಚೆನ್ನೈ, ಹೈದರಾಬಾದಿನಿಂದ ತಜ್ಞರ ತಂಡ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯಕ್ಕಾಗಿ ಜಲಾಶಯಕ್ಕೆ ಭೇಟಿ ನೀಡಲಿದೆ.

Join Our Telegram: https://t.me/dcgkannada

ಕೊಪ್ಪಳ ತಾಲೂಕಿನ ಮುನಿರಾಬಾದ್‌ನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ (Tungabhadra dam) ನಿರ್ಮಾಣ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿ ಜಲಾಶಯದ ಕ್ರೆಸ್ಟ್‌ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಒಂದೇ ಗೇಟ್‌ ಮೇಲೆ ಒತ್ತಡ ಹೆಚ್ಚಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಗೇಟ್ ಮುರಿದ ಪರಿಣಾಮ ನೀರು ರಭಸವಾಗಿ ನುಗ್ಗುತ್ತಿದ್ದು, ಜಲಾಶಯದ ಹೊರ ಹರಿವು 70 ರಿಂದ 1 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದೆ. ಪೂರ್ಣ ಭರ್ತಿಯಾಗಿರುವ ಜಲಾಶಯದ ಒಂದು ಕ್ರೆಸ್ಟ್‌ ಗೇಟ್‌ನ ಚೈನ್ ಲಿಂಕ್ ಮುರಿದಿದ್ದು, ತುಂಗಭದ್ರಾ ನದಿ ಪಾತ್ರದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಸದ್ಯ, 105 ಟಿಎಂಸಿ ಸಾಮರ್ಥ್ಯದ ಜಲಾಶಯ (Tungabhadra dam) ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನು ನೋಡುವುದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ದುರಸ್ತಿಗೆ ಜಲಾಶಯದ ಅರ್ಧ ನೀರು ಖಾಲಿಯಾಗಬೇಕು:
ದುರಸ್ತಿ ಮಾಡಬೇಕಾದರೇ ಜಲಾಶಯದಲ್ಲಿನ 60 ಟಿಎಂಸಿ ನೀರು ಖಾಲಿ ಮಾಡಬೇಕಾಗುತ್ತದೆ. ಜಲಾಶಯದ ಮೂಲ ವಿನ್ಯಾಸದ ಪ್ರತಿ ತರಿಸಿಕೊಳ್ಳಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ತೀರ್ಮಾನಿಸಲಾಗುತ್ತದೆ. ನೀರಿನ ಹೊರ ಹರಿವಿನ ಪ್ರಮಾಣವನ್ನು 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ ಬಳಿಕ ತುಂಡಾದ ಚೈನ್‌ ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3- 4 ದಿನವಾದರೂ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ – ಹೊಸಪೇಟೆ ಗಡಿಭಾಗದಲ್ಲಿರುವ ಜಲಾಶಯದ ಕರ್ನಾಟಕದ ವಿವಿಧ ಜಿಲ್ಲೆಗಳು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಕ್ಕೆ ಜೀವನಾಡಿಯಾಗಿದೆ. ಮಲೆನಾಡು ಭಾಗದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ತುಂಗ ಮತ್ತು ಭದ್ರಾ ನದಿಗಳು ಮೈದುಂಬಿ ಹರಿದಿವೆ. ಆದ್ದರಿಂದ ಜಲಾಶಯ ಜುಲೈನಲ್ಲಿಯೇ ಸಂಪೂರ್ಣ ಭರ್ತಿಯಾಗಿದೆ.

ತುಂಗಭದ್ರಾ ಜಲಾಶಯದ (Tungabhadra dam) ಪೂರ್ಣ ಮಟ್ಟ 1633 ಅಡಿಗಳು. ಸದ್ಯದ ಮಾಹಿತಿಯಂತೆ ಜಲಾಶಯದಲ್ಲಿ 1632 ಅಡಿಗಳ ನೀರಿನ ಸಂಗ್ರಹವಿದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 10 ಟಿಎಂಸಿ ಅಡಿ ನೀರಿದೆ. ಜಲಾಶಯಕ್ಕೆ ಒಳಹರಿವು 45,086 ಕ್ಯುಸೆಕ್ ಇದೆ.

ಸಿಎಂ, ಡಿಸಿಎಂಗೆ ಮಾಹಿತಿ:
ಜಲಾಶಯಕ್ಕೆ ಭಾನುವಾರ ಬೆಳಗಿನ ಜಾವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದಿರುವ ಕಾರಣ ಅನಿವಾರ್ಯವಾಗಿ ನೀರು ಹೊರಬಿಡಬೇಕಾಗಿದೆ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.

ಸದ್ಯದ ಮಟ್ಟಿಗೆ 60ರಿಂದ 65 ಟಿಎಂಸಿ ಅಡಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. ಕನಿಷ್ಠ 20 ಅಡಿ ನೀರು ಖಾಲಿಯಾದರೆ ಮಾತ್ರ ನಿಖರವಾಗಿ ಸಮಸ್ಯೆ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ’ ಎಂದು ತಿಳಿಸಿದರು.

ಆಣೆಕಟ್ಟು ನಿರ್ಮಿಸಿದ ವಿನ್ಯಾಸವನ್ನು ತರಿಸಿಕೊಳ್ಳಲಾಗಿದ್ದು, ನೀರಿನ ರಭಸ ಹೆಚ್ಚಿರುವ ಕಾರಣ ಕೆಳಗಡೆ ಇಳಿದು ಕೆಲಸಮಾಡಲು ಆಗುವುದಿಲ್ಲ. ಸದ್ಯಕ್ಕೆ ಒಂದು ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರು ಹೊರಬಿಡುವ ಪ್ರಮಾಣ 2.50 ಲಕ್ಷ ಕ್ಯುಸೆಕ್ ದಾಟಿದರೆ ಮಾತ್ರ ಜನರಿಗೆ ತೊಂದರೆಯಾಗುತ್ತದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದರು.

ಕಡಿಮೆ ಸಮಯದಲ್ಲಿ ಸಮಸ್ಯೆ ಪರಿಹರಿಸಲು ಬೆಂಗಳೂರು, ಹೈದರಾಬಾದ್, ಚೆನ್ನೈನಿಂದ ತಜ್ಞರ ತಂಡ ಬರಲಿದೆ. ಬಳಿಕ ಏನು ಮಾಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

Latest News

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸಿಲಿಂಡರ್ ಪೂರೈಕೆ,ವಿತರಣೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.ಗ್ರಾಹಕರು ಆತಂಕಗೊAಡು ಏಜೆನ್ಸಿಗಳ ಮುಂದೆ ಸರದಿಯಲ್ಲಿ ನಿಲ್ಲುವುದು ಬೇಡ