Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಕೊಪ್ಪಳ: ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra dam) 19ನೇ ಗೇಟ್‌ನ ಚೈನ್‌ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ.

ಏತನ್ಮಧ್ಯೆ, ಬೆಂಗಳೂರು, ಚೆನ್ನೈ, ಹೈದರಾಬಾದಿನಿಂದ ತಜ್ಞರ ತಂಡ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯಕ್ಕಾಗಿ ಜಲಾಶಯಕ್ಕೆ ಭೇಟಿ ನೀಡಲಿದೆ.

Join Our Telegram: https://t.me/dcgkannada

ಕೊಪ್ಪಳ ತಾಲೂಕಿನ ಮುನಿರಾಬಾದ್‌ನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ (Tungabhadra dam) ನಿರ್ಮಾಣ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿ ಜಲಾಶಯದ ಕ್ರೆಸ್ಟ್‌ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಒಂದೇ ಗೇಟ್‌ ಮೇಲೆ ಒತ್ತಡ ಹೆಚ್ಚಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಗೇಟ್ ಮುರಿದ ಪರಿಣಾಮ ನೀರು ರಭಸವಾಗಿ ನುಗ್ಗುತ್ತಿದ್ದು, ಜಲಾಶಯದ ಹೊರ ಹರಿವು 70 ರಿಂದ 1 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದೆ. ಪೂರ್ಣ ಭರ್ತಿಯಾಗಿರುವ ಜಲಾಶಯದ ಒಂದು ಕ್ರೆಸ್ಟ್‌ ಗೇಟ್‌ನ ಚೈನ್ ಲಿಂಕ್ ಮುರಿದಿದ್ದು, ತುಂಗಭದ್ರಾ ನದಿ ಪಾತ್ರದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಸದ್ಯ, 105 ಟಿಎಂಸಿ ಸಾಮರ್ಥ್ಯದ ಜಲಾಶಯ (Tungabhadra dam) ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನು ನೋಡುವುದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ದುರಸ್ತಿಗೆ ಜಲಾಶಯದ ಅರ್ಧ ನೀರು ಖಾಲಿಯಾಗಬೇಕು:
ದುರಸ್ತಿ ಮಾಡಬೇಕಾದರೇ ಜಲಾಶಯದಲ್ಲಿನ 60 ಟಿಎಂಸಿ ನೀರು ಖಾಲಿ ಮಾಡಬೇಕಾಗುತ್ತದೆ. ಜಲಾಶಯದ ಮೂಲ ವಿನ್ಯಾಸದ ಪ್ರತಿ ತರಿಸಿಕೊಳ್ಳಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ತೀರ್ಮಾನಿಸಲಾಗುತ್ತದೆ. ನೀರಿನ ಹೊರ ಹರಿವಿನ ಪ್ರಮಾಣವನ್ನು 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ ಬಳಿಕ ತುಂಡಾದ ಚೈನ್‌ ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3- 4 ದಿನವಾದರೂ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ – ಹೊಸಪೇಟೆ ಗಡಿಭಾಗದಲ್ಲಿರುವ ಜಲಾಶಯದ ಕರ್ನಾಟಕದ ವಿವಿಧ ಜಿಲ್ಲೆಗಳು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಕ್ಕೆ ಜೀವನಾಡಿಯಾಗಿದೆ. ಮಲೆನಾಡು ಭಾಗದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ತುಂಗ ಮತ್ತು ಭದ್ರಾ ನದಿಗಳು ಮೈದುಂಬಿ ಹರಿದಿವೆ. ಆದ್ದರಿಂದ ಜಲಾಶಯ ಜುಲೈನಲ್ಲಿಯೇ ಸಂಪೂರ್ಣ ಭರ್ತಿಯಾಗಿದೆ.

ತುಂಗಭದ್ರಾ ಜಲಾಶಯದ (Tungabhadra dam) ಪೂರ್ಣ ಮಟ್ಟ 1633 ಅಡಿಗಳು. ಸದ್ಯದ ಮಾಹಿತಿಯಂತೆ ಜಲಾಶಯದಲ್ಲಿ 1632 ಅಡಿಗಳ ನೀರಿನ ಸಂಗ್ರಹವಿದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 10 ಟಿಎಂಸಿ ಅಡಿ ನೀರಿದೆ. ಜಲಾಶಯಕ್ಕೆ ಒಳಹರಿವು 45,086 ಕ್ಯುಸೆಕ್ ಇದೆ.

ಸಿಎಂ, ಡಿಸಿಎಂಗೆ ಮಾಹಿತಿ:
ಜಲಾಶಯಕ್ಕೆ ಭಾನುವಾರ ಬೆಳಗಿನ ಜಾವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದಿರುವ ಕಾರಣ ಅನಿವಾರ್ಯವಾಗಿ ನೀರು ಹೊರಬಿಡಬೇಕಾಗಿದೆ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.

ಸದ್ಯದ ಮಟ್ಟಿಗೆ 60ರಿಂದ 65 ಟಿಎಂಸಿ ಅಡಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. ಕನಿಷ್ಠ 20 ಅಡಿ ನೀರು ಖಾಲಿಯಾದರೆ ಮಾತ್ರ ನಿಖರವಾಗಿ ಸಮಸ್ಯೆ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ’ ಎಂದು ತಿಳಿಸಿದರು.

ಆಣೆಕಟ್ಟು ನಿರ್ಮಿಸಿದ ವಿನ್ಯಾಸವನ್ನು ತರಿಸಿಕೊಳ್ಳಲಾಗಿದ್ದು, ನೀರಿನ ರಭಸ ಹೆಚ್ಚಿರುವ ಕಾರಣ ಕೆಳಗಡೆ ಇಳಿದು ಕೆಲಸಮಾಡಲು ಆಗುವುದಿಲ್ಲ. ಸದ್ಯಕ್ಕೆ ಒಂದು ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರು ಹೊರಬಿಡುವ ಪ್ರಮಾಣ 2.50 ಲಕ್ಷ ಕ್ಯುಸೆಕ್ ದಾಟಿದರೆ ಮಾತ್ರ ಜನರಿಗೆ ತೊಂದರೆಯಾಗುತ್ತದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದರು.

ಕಡಿಮೆ ಸಮಯದಲ್ಲಿ ಸಮಸ್ಯೆ ಪರಿಹರಿಸಲು ಬೆಂಗಳೂರು, ಹೈದರಾಬಾದ್, ಚೆನ್ನೈನಿಂದ ತಜ್ಞರ ತಂಡ ಬರಲಿದೆ. ಬಳಿಕ ಏನು ಮಾಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್