ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)

ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)


ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ತಾಂಡಾದಲ್ಲಿ ( Koluru tanda) ಶತಮಾನಗಳಿಂದ ವಾಸಿಸುತ್ತಿರುವ ನಿವಾಸಿಗಳಿಗೆ ವಾಸಿಸುತ್ತಿರುವ ಜಾಗೆಯ ಕುರಿತು ಗೊಂದಲ ಸೃಷ್ಟಿಸಿ ಅದರ ದುರ್ಲಾಭ ಪಡೆದುಕೊಳ್ಳಲು ಹಾಲಿ, ಮಾಜಿ ಶಾಸಕರ ಹೆಸರುಗಳನ್ನು ಬಳಸಿಕೊಂಡು ಕೆಲವು ಪುಢಾರಿಗಳು ವಸೂಲಿ ದಂಧೆಗೆ ಇಳಿದಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಆಗ್ರಹಿಸಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ತಾಂಡಾ ನಿವಾಸಿಗಳೊಂದಿಗೆ ಆಗಮಿಸಿದ್ದ ಅವರು ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ತಾಲ್ಲೂಕಿನ ಕೋಳೂರು ತಾಂಡಾ Koluru tanda) ನಿವಾಸಿಗಳು ತಾಂಡಾದ ಸರ್ವೆ ನಂ.167//3ಬ, 167//2, 167//1 , 169//* ರಲ್ಲಿನ ಮಾಲೀಕರುಗಳಿಗೆ ತಮ್ಮ ಸ್ವಂತ ಹಣವನ್ನು ಕೊಟ್ಟು ಅವತ್ತಿನ ಕಾಲದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈಚೇಗೆ ಸರ್ಕಾರದ ಸುತ್ತೋಲೆಯಂತೆ ನಮ್ಮ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದರ ದುರುಪಯೋಗವನ್ನು ಮೂಲ ಮಾಲೀಕರೂ ಹಾಗೂ ಮಧ್ಯವರ್ತಿಗಳು ಪಡೆದುಕೊಂಡು ಇಲ್ಲಿನ ನಿವಾಸಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಜೊತೆಗೆ ಇರುವ ಕೆಲವು ಪುಢಾರಿಗಳು ಈ ರೀತಿ ಬಡವರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದು ಜನಪ್ರತಿನಿಧಿಗಳ ಮುಖಕ್ಕೆ ಕಪ್ಪು ಮಸಿ ಬಳಿಯುವ ಕುತಂತ್ರವೂ ನಡೆದಿದೆ. ಇದಕ್ಕೆ ಹಾಲಿ, ಮಾಜಿ ಶಾಸಕರು ಆಸ್ಪದ ಕೊಡದೇ ಅಂತವರಿಗೆ ತಿಳಿವಳಿಕೆ ಹೇಳಬೇಕು ಎಂದು ಮನವಿ ಮಾಡಿದರು.

ಸರ್ಕಾರಕ್ಕೆ ಪುಕ್ಕಟೆಯಾಗಿ ಜಮೀನು ಕೊಟ್ಟಿದ್ದೇವೆ.ಅದಕ್ಕಾಗಿ ನಮಗೆ ಪರಿಹಾರ ಕೊಡಬೇಕು ಎಂದು ವಿನಾಕಾರಣ ಕೆಲವು ಪಟ್ಟಭದ್ರರು ಸರಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಮತ್ತು ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.ಅಧಿಕಾರಿಗಳಿಗೆ ಧಮಕಿ ಹಾಕಿ ತಮಗೆ ಸಂಬಂಧಪಡದ ಜಾಗೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸದರಿ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಡವರಿಗೆ ಅನ್ಯಾಯ ಆಗದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಇಂತಹ ದುರ್ಮಾರ್ಗದಿಂದ ಬಡವರಿಗೆ ತೊಂದರೆ ಕೊಡುವ ಕೆಲಸ ಮುಂದುವರೆದರೆ, ನಮ್ಮ ತಾಂಡಾವನ್ನು ಕಂದಾಯ ಗ್ರಾಮ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಮೂಲ ಮಾಲೀಕರಿಗೆ ಹಣ ಕೊಟ್ಟು ಜಮೀನು ಖರೀದಿ ಮಾಡಿದ್ದು ಅವರಿಗೆ ಯಾವುದೇ ರೀತಿಯ ಪರಿಹಾರವನ್ನು ನೀಡಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಿದರು.

ತಾಂಡಾದ ಪ್ರಮುಖರಾದ ಶಾಂತಾರಾಮ ಮೇಲ್ಮನಿ, ರಾಮಸ್ವಾಮಿ ಸೀತಿಮನಿ, ಪ್ರತಾಪ ಸೀತಿಮನಿ, ತುಳಜಾರಾಮ ಚವ್ಹಾಣ, ಸಯಭಾಷ ದಿಂಡೂರ, ಮುತ್ತು ಚವ್ಹಾಣ, ಪ್ರದೀಪ ರಾಠೋಡ, ವಿಕಾಸ ಚವ್ಹಾಣ, ಶಿವಾನಂದ ರಾಠೋಡ ಮೊದಲಾದವರು ಇದ್ದರು.

ಹಾಲಿ, ಮಾಜಿ ಶಾಸಕರು ರಾಜಕಾರಣ ಮಾಡುವಾಗ ರಾಜಕಾರಣ ಮಾಡಿ.ಬಡವರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯಕ್ಕೆ ಬನ್ನಿ. ಕೆಲವರು ಅಧಿಕಾರಿಗಳಿಗೆ ಬ್ಲಾಕ್‌ಮೇಲ್ ಮಾಡುವುದು, ರೊಕ್ಕಾ ಎತ್ತುವುದು ಮಾಡುತ್ತಿದ್ದಾರೆ. ಅನವಶ್ಯಕವಾಗಿ ಬಡವರಿಗೆ ತೊಂದರೆ ಕೊಡುತ್ತಿರುವವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest News

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಮುಖಂಡ ಅಶೋಕ ಭೋವಿ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತೆ ಮಾರಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಆವರಣದಲ್ಲಿ