BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ

ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 12 ಜನ ಬೆಳಗಾವಿಯಲ್ಲಿ ಸಭೆ ನಡೆಸಿದ್ದು, ನನಗೆ ಆಘಾತವಾಗಿದೆ. ಅವರು ಬೆಳಗಾವಿಯ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಹೇಳಿದ್ದು, ಅವರು ಪಾದಯಾತ್ರೆ ನಡೆಸಿದರೆ ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಎರಡಾಗುತ್ತದೆ. ಕೇಂದ್ರ ನಾಯಕರು ಮಧ್ಯ ಪ್ರವೇಶಿಸದೇ ಹೋದರೆ ಪ್ರತಿ ತಾಲೂಕಿನಲ್ಲೂ ಪಕ್ಷ ಇಭ್ಭಾಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Join Our Telegram: https://t.me/dcgkannada

ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರು ಸಂಘಟನೆಯಲ್ಲಿದ್ದರು, ಪಕ್ಷ ಕಟ್ಟಿದವರು. ತಮಗೆ ಏನು ನೋವಾಗಿದೆ ಎಂದು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದುಕೊಂಡು ಕೇಂದ್ರ ನಾಯಕರು ನಿರ್ಲಕ್ಷ್ಯ ಮಾಡಬಾರದು ಎಂದರು.

ಪಕ್ಷದಡಿ ಕೆಲಸ ಮಾಡಿದ್ದರೂ ಬಹಳ ಜನರಿಗೆ ನೋವಿದೆ. ಲೋಕಸಭಾ ಚುನಾವಣೆ ಸಂದರ್ಭ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಯಡಿಯೂರಪ್ಪ ಅವರ ಕುಟುಂಬದ ಕೈಗೆ ಅಧಿಕಾರ ನೀಡಿದ್ದಕ್ಕೇ ಪಕ್ಷ 27 ರಿಂದ 17 ಸ್ಥಾನಕ್ಕೆ ಇಳಿದಿದ್ದು. ಈಗ ಜೆಡಿಎಸ್ ಹೊಂದಾಣಿಕೆ ಮಾಡದೆ ಹೋಗಿದ್ದರೆ ಹೇಗೆ ಎಂದು ಈಶ್ವರಪ್ಪ (K.S. Eshwarappa) ಪ್ರಶ್ನಿಸಿದರು.

ಇದನ್ನೂ ಓದಿ: BJP Rebel Leaders: ಬಿಜೆಪಿಯಲ್ಲೀಗ 20 ಬಣ! ಕೂಡಲಸಂಗಮ to ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್?

22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ ಬಗ್ಗೆ ಕೇಂದ್ರದ ನಾಯಕರೂ ಕಿವಿಗೆ ಹಾಕಿಕೊಳ್ಳದೆ ಹೋದರೆ ರಾಜ್ಯದಲ್ಲಿ ಪಕ್ಷಕ್ಕೆ ದುರ್ದೆಶೆ ಶುರುವಾಗಿದೆ ಅಂತಲೇ ಅರ್ಥ, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 66 ಸ್ಥಾನ ಮಾತ್ರ ಗಳಿಸಿದ್ದ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತೆಷ್ಟು ಸ್ಥಾನಗಳಿಗೆ ಕುಸಿಯಲಿದೆಯೋ ಎಂದು ಈಶ್ವರಪ್ಪ ಹೇಳಿದರು.

Latest News

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯ ವರ್ಗದಿಂದ ಹಿಂದಿನ ಅಧ್ಯಕ್ಷ ಹೇಮಣ್ಣ ಮೇಟಿ, ಬಸವರಾಜ ಪಾಟೀಲ, ಶಾಂತಪ್ಪ ಸಂಕನಾಳ, ಬಾಬು ಸೂಳಿಭಾವಿ,ಸಿಂದೂಬಲ್ಲಾಳ ನಾಡಗೌಡ, ಹಿಂದುಳಿದ ಅ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),