ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!

ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!



ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ನಿವಾಸಿ ಬುಡ್ಡೇಸಾಬ ಚಪ್ಪರಬಂದ ಸಿಂಜೆಂಟಾ ಕಂಪನಿಯ (Syngenta Company) ಮೋಸದ ವಿರುದ್ಧ ಕಾರ್ಮಿಕ ಇಲಾಖೆಯ ಆಯುಕ್ತರಿಗೆ, ಇಲ್ಲಿನ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮೂರು ವರ್ಷಗಳ ಕಾಲ “ಸಿಂಜೆಂಟಾ” (Syngenta Company) ಎಂಬ ಖಾಸಗಿ ಕಂಪನಿಯಲ್ಲಿ ಎಂ.ಡಿ.ಓ ಆಗಿ ಕಾರ್ಯನಿರ್ವಹಿಸುತ್ತಿದ್ದೆ. ಕರ್ನಾಟಕದ ಕಂಪನಿಯ ನನ್ನ ಮೇಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನನ್ನನ್ನು ದಿನಾಂಕ 06-03-2024 ರಂದು ನನಗೆ ನೋಟಿಸ್ ಪಿರಿಯಡ್ ನೀಡದೇ, ಕಾರ್ಮಿಕ ಕಾಯ್ದೆ ನಿಯಮಗಳನ್ನು ಅನುಸರಿಸದೇ ಹಾಗೂ ನನ್ನಿಂದ ರಾಜೀನಾಮೆ ಪಡೆಯದೇ ಏಕಾಏಕಿ ನನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Join Our Telegram: https://t.me/dcgkannada

ಈ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲಾ ಕಾರ್ಮಿಕ ಸಂಧಾನಾಧಿಕಾರಿಗಳಿಗೆ ದೂರನ್ನು ನೀಡಿದ್ದೇನೆ.ನನ್ನ ದೂರಿನನ್ವಯ ಸಂಧಾನಾಧಿಕಾರಿಗಳು ಕಂಪನಿಯವರಿಗೆ ಮೊದಲನೇ ನೋಟಿಸ್‌ನ್ನು 27-3-2024 ರಂದು ಜಾರಿ ಮಾಡಿ ಅದರಲ್ಲಿ ದಿನಾಂಕ 15-4-2024 ರಂದು ಸಂಧಾನ ಸಭೆ ನಿಗದಿ ಮಾಡಿದ್ದರು.ಅದು ಕಂಪನಿಯ ಅಧಿಕಾರಿಗಳು ಹಾಗೂ ಅರ್ಜಿದಾರನಾದ ನನ್ನ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದದ್ದರಿಂದ ಅದು ವಿಫಲವಾಯಿತು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ನಂತರ ಎರಡನೇ ಸಭೆಯನ್ನು 24-5-2024 ರಂದು ಮತ್ತೆ ಸಂಧಾನಕ್ಕೆ ಕರೆಯಲಾಯಿತು.ಅಂದಿನ ದಿನ ಕಂಪನಿಯವರು ಕೆಲಸ ಮತ್ತು ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ನೀಡುತ್ತೇವೆ. ಆದರೆ ಪ್ರೋತ್ಸಾಹಕ ಹಣ(ಇನ್ಸೆಂಟಿವ್) ನೀಡುವುದಿಲ್ಲ ಎಂದು ವಾದ ಮಾಡಿದರು. ಎಲ್ಲ ವಿಚಾರಗಳನ್ನು ಗಮನಿಸಿದ ಮಾನ್ಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು,ಸಭೆಯಲ್ಲಿ ನಡೆದ ವಿಚಾರಗಳ ಬಗ್ಗೆ ಪತ್ರವೊಂದನ್ನು ಬರೆದರು.ಅದಕ್ಕೆ ಸಿಂಜೆಂಟಾ ಕಂಪನಿಯ ಅಧಿಕಾರಿಗಳು ಸಹಿ ಮಾಡಲು ಧಿಕ್ಕರಿಸಿ ವಾಪಸ್ ಹೋದರು.

ಮತ್ತೆ ಸಂಧಾನ ಅಧಿಕಾರಿಗಳು 24-6-2024 ರಂದು ಆ ಸಂಧಾನ ಸಭೆಗೆ ಕಂಪನಿಯವರು ಬಾರದೇ ಮ್ಯಾನಪವರ್ ಎಂಬ ಏಜೆನ್ಸಿಯವರನ್ನು ಕಳುಹಿಸಿ ನಿಮಗೆ ಕೆಲಸ ನೀಡಲಾಗುವುದಿಲ್ಲ.ನಿಮ್ಮ ಬಾಕಿ ಇರುವ ಪ್ರೋತ್ಸಾಹಕ ಹಣವನ್ನು ಮಾತ್ರ ನೀಡುತ್ತೇವೆ ಎಂದು ಸೂಚಿಸಿದರು.

ಆಗ ನನ್ನ ಸಂಬಳವನ್ನಾದರೂ ಇವರಿಂದ ಪಡೆದುಕೊಂಡು ಇವರು ತಪ್ಪು ಮಾಡಿದ್ದನ್ನು ಸಾಬೀತುಪಡಿಸುವಲ್ಲಿ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಅದರಂತೆ ದೀರ್ಘ ಕಾಲದ ನಂತರ ಅಂದರೆ 30-6-2024 ರಂದು ಮ್ಯಾನಪವರ್ ಏಜೆನ್ಸಿಯವರು ಬಂದು ಮೂರುವರೆ ತಿಂಗಳ ಸಂಬಳ ಮತ್ತು ನನ್ನ ಪ್ರೋತ್ಸಾಹಕ ಹಣವನ್ನು ಚೆಕ್(ಚೆಕ್ ನಂ.664898) ರೂಪದಲ್ಲಿ ನೀಡಿದ್ದಾರೆ.

ಈ ಪ್ರಕ್ರಿಯೆಯನ್ನು ವಿಜಯಪುರ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕೇವಲ ನನ್ನ ಸಂಬಳ ಮತ್ತು ಪ್ರೋತ್ಸಾಹಕ ಹಣವನ್ನು ಕೊಡಿಸುವ ಪ್ರಕ್ರಿಯೆ ಎಂದು ಪರಿಗಣಿಸಿ ಕಂಪನಿಯವರಿಗೆ ನನ್ನ ಕೆಲಸವನ್ನು ಮರಳಿ ನೀಡಲು ಸೂಚಿಸಬೇಕು. ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದರಿಂದ ನನ್ನ ಕುಟುಂಬದ ಉಪಜೀವನ ನಡೆಸಲು ಕಷ್ಟಕರವಾಗಿತ್ತು. ಸದರಿ ವಿಷಯವಾಗಿ ಕಂಪನಿಯಿಂದ ನನಗಾದ ಅನ್ಯಾಯವನ್ನು ಮಾನ್ಯ ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಕಾರ್ಮಿಕ ಸಚಿವರು, ಉಸ್ತುವಾರಿ ಸಚಿವರು,ಕಾರ್ಮಿಕ ಇಲಾಖೆಯ ಆಯುಕ್ತರು ಇವರೆಲ್ಲರ ಗಮನಕ್ಕೆ ತಂದಿರುತ್ತೇನೆ. ಮಾನ್ಯ ದಯಾಳುಗಳಾದ ತಾವು ನನಗಾದ ಈ ಅನ್ಯಾಯವನ್ನು ಸರಿಪಡಿಸಿ ಕೆಲಸ ಕೊಡಿಸಬೇಕು ಇಲ್ಲದಿದ್ದಲ್ಲಿ ಸಿಂಜೆಂಟಾ ಕಂಪನಿಯ ಅಧಿಕಾರಿಗಳ ಏಕಚಕ್ರಾಧಿಪತ್ಯದ ಆಡಳಿತದ ವಿರುದ್ಧ ಮಾನ್ಯ ಘನ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆದುಕೊಳ್ಳಲು ಅಧಿಕೃತವಾಗಿ ಇಲಾಖೆಯಿಂದ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿಕೊಳ್ಳುವುದಾಗಿ ತಹಶೀಲ್ದಾರ್‌ಗೆ ಶನಿವಾರ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ