ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!

ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!



ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ನಿವಾಸಿ ಬುಡ್ಡೇಸಾಬ ಚಪ್ಪರಬಂದ ಸಿಂಜೆಂಟಾ ಕಂಪನಿಯ (Syngenta Company) ಮೋಸದ ವಿರುದ್ಧ ಕಾರ್ಮಿಕ ಇಲಾಖೆಯ ಆಯುಕ್ತರಿಗೆ, ಇಲ್ಲಿನ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮೂರು ವರ್ಷಗಳ ಕಾಲ “ಸಿಂಜೆಂಟಾ” (Syngenta Company) ಎಂಬ ಖಾಸಗಿ ಕಂಪನಿಯಲ್ಲಿ ಎಂ.ಡಿ.ಓ ಆಗಿ ಕಾರ್ಯನಿರ್ವಹಿಸುತ್ತಿದ್ದೆ. ಕರ್ನಾಟಕದ ಕಂಪನಿಯ ನನ್ನ ಮೇಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನನ್ನನ್ನು ದಿನಾಂಕ 06-03-2024 ರಂದು ನನಗೆ ನೋಟಿಸ್ ಪಿರಿಯಡ್ ನೀಡದೇ, ಕಾರ್ಮಿಕ ಕಾಯ್ದೆ ನಿಯಮಗಳನ್ನು ಅನುಸರಿಸದೇ ಹಾಗೂ ನನ್ನಿಂದ ರಾಜೀನಾಮೆ ಪಡೆಯದೇ ಏಕಾಏಕಿ ನನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

Join Our Telegram: https://t.me/dcgkannada

ಈ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲಾ ಕಾರ್ಮಿಕ ಸಂಧಾನಾಧಿಕಾರಿಗಳಿಗೆ ದೂರನ್ನು ನೀಡಿದ್ದೇನೆ.ನನ್ನ ದೂರಿನನ್ವಯ ಸಂಧಾನಾಧಿಕಾರಿಗಳು ಕಂಪನಿಯವರಿಗೆ ಮೊದಲನೇ ನೋಟಿಸ್‌ನ್ನು 27-3-2024 ರಂದು ಜಾರಿ ಮಾಡಿ ಅದರಲ್ಲಿ ದಿನಾಂಕ 15-4-2024 ರಂದು ಸಂಧಾನ ಸಭೆ ನಿಗದಿ ಮಾಡಿದ್ದರು.ಅದು ಕಂಪನಿಯ ಅಧಿಕಾರಿಗಳು ಹಾಗೂ ಅರ್ಜಿದಾರನಾದ ನನ್ನ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದದ್ದರಿಂದ ಅದು ವಿಫಲವಾಯಿತು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ನಂತರ ಎರಡನೇ ಸಭೆಯನ್ನು 24-5-2024 ರಂದು ಮತ್ತೆ ಸಂಧಾನಕ್ಕೆ ಕರೆಯಲಾಯಿತು.ಅಂದಿನ ದಿನ ಕಂಪನಿಯವರು ಕೆಲಸ ಮತ್ತು ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ನೀಡುತ್ತೇವೆ. ಆದರೆ ಪ್ರೋತ್ಸಾಹಕ ಹಣ(ಇನ್ಸೆಂಟಿವ್) ನೀಡುವುದಿಲ್ಲ ಎಂದು ವಾದ ಮಾಡಿದರು. ಎಲ್ಲ ವಿಚಾರಗಳನ್ನು ಗಮನಿಸಿದ ಮಾನ್ಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು,ಸಭೆಯಲ್ಲಿ ನಡೆದ ವಿಚಾರಗಳ ಬಗ್ಗೆ ಪತ್ರವೊಂದನ್ನು ಬರೆದರು.ಅದಕ್ಕೆ ಸಿಂಜೆಂಟಾ ಕಂಪನಿಯ ಅಧಿಕಾರಿಗಳು ಸಹಿ ಮಾಡಲು ಧಿಕ್ಕರಿಸಿ ವಾಪಸ್ ಹೋದರು.

ಮತ್ತೆ ಸಂಧಾನ ಅಧಿಕಾರಿಗಳು 24-6-2024 ರಂದು ಆ ಸಂಧಾನ ಸಭೆಗೆ ಕಂಪನಿಯವರು ಬಾರದೇ ಮ್ಯಾನಪವರ್ ಎಂಬ ಏಜೆನ್ಸಿಯವರನ್ನು ಕಳುಹಿಸಿ ನಿಮಗೆ ಕೆಲಸ ನೀಡಲಾಗುವುದಿಲ್ಲ.ನಿಮ್ಮ ಬಾಕಿ ಇರುವ ಪ್ರೋತ್ಸಾಹಕ ಹಣವನ್ನು ಮಾತ್ರ ನೀಡುತ್ತೇವೆ ಎಂದು ಸೂಚಿಸಿದರು.

ಆಗ ನನ್ನ ಸಂಬಳವನ್ನಾದರೂ ಇವರಿಂದ ಪಡೆದುಕೊಂಡು ಇವರು ತಪ್ಪು ಮಾಡಿದ್ದನ್ನು ಸಾಬೀತುಪಡಿಸುವಲ್ಲಿ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಅದರಂತೆ ದೀರ್ಘ ಕಾಲದ ನಂತರ ಅಂದರೆ 30-6-2024 ರಂದು ಮ್ಯಾನಪವರ್ ಏಜೆನ್ಸಿಯವರು ಬಂದು ಮೂರುವರೆ ತಿಂಗಳ ಸಂಬಳ ಮತ್ತು ನನ್ನ ಪ್ರೋತ್ಸಾಹಕ ಹಣವನ್ನು ಚೆಕ್(ಚೆಕ್ ನಂ.664898) ರೂಪದಲ್ಲಿ ನೀಡಿದ್ದಾರೆ.

ಈ ಪ್ರಕ್ರಿಯೆಯನ್ನು ವಿಜಯಪುರ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕೇವಲ ನನ್ನ ಸಂಬಳ ಮತ್ತು ಪ್ರೋತ್ಸಾಹಕ ಹಣವನ್ನು ಕೊಡಿಸುವ ಪ್ರಕ್ರಿಯೆ ಎಂದು ಪರಿಗಣಿಸಿ ಕಂಪನಿಯವರಿಗೆ ನನ್ನ ಕೆಲಸವನ್ನು ಮರಳಿ ನೀಡಲು ಸೂಚಿಸಬೇಕು. ಏಕಾಏಕಿ ಕೆಲಸದಿಂದ ತಗೆದು ಹಾಕಿದ್ದರಿಂದ ನನ್ನ ಕುಟುಂಬದ ಉಪಜೀವನ ನಡೆಸಲು ಕಷ್ಟಕರವಾಗಿತ್ತು. ಸದರಿ ವಿಷಯವಾಗಿ ಕಂಪನಿಯಿಂದ ನನಗಾದ ಅನ್ಯಾಯವನ್ನು ಮಾನ್ಯ ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಕಾರ್ಮಿಕ ಸಚಿವರು, ಉಸ್ತುವಾರಿ ಸಚಿವರು,ಕಾರ್ಮಿಕ ಇಲಾಖೆಯ ಆಯುಕ್ತರು ಇವರೆಲ್ಲರ ಗಮನಕ್ಕೆ ತಂದಿರುತ್ತೇನೆ. ಮಾನ್ಯ ದಯಾಳುಗಳಾದ ತಾವು ನನಗಾದ ಈ ಅನ್ಯಾಯವನ್ನು ಸರಿಪಡಿಸಿ ಕೆಲಸ ಕೊಡಿಸಬೇಕು ಇಲ್ಲದಿದ್ದಲ್ಲಿ ಸಿಂಜೆಂಟಾ ಕಂಪನಿಯ ಅಧಿಕಾರಿಗಳ ಏಕಚಕ್ರಾಧಿಪತ್ಯದ ಆಡಳಿತದ ವಿರುದ್ಧ ಮಾನ್ಯ ಘನ ನ್ಯಾಯಾಲಯದಲ್ಲಿ ದಾವೆ ಹೂಡಿ ನ್ಯಾಯ ಪಡೆದುಕೊಳ್ಳಲು ಅಧಿಕೃತವಾಗಿ ಇಲಾಖೆಯಿಂದ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿಕೊಳ್ಳುವುದಾಗಿ ತಹಶೀಲ್ದಾರ್‌ಗೆ ಶನಿವಾರ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್