B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)

B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)


ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ
ಸೋಮನಾಳ ಗ್ರಾಮದಲ್ಲಿನ ಮೃತ ಪಿಎಸ್ಐ ಪರಶುರಾಮ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ B.Y ವಿಜಯೇಂದ್ರ (B.Y Vijayendra) ತರಾಟೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಘಟನೆ ನಡೆದು 11 ದಿನವಾಗಿದೆ. ಆದ್ರೆ ಅಪರಾಧಿಗಳ ಬಂಧನವಾಗಿಲ್ಲ. ಅಪರಾಧಿ ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಶಾಸಕ ಚೆನ್ನರೆಡ್ಡಿ‌ಗೆ ಟಾಂಗ್ ಕೊಟ್ಟರು.

Join Our telegram: https://t.me/dcgkannada

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಕೂಡಲೇ ಆರೋಪಿಗಳ ಬಂಧನವಾಗಬೇಕು. ಪರಶುರಾಮ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಪರಶುರಾಮ್ ಪತ್ನಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ನೀಡಬೇಕು ಎಂದು ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ರಾಜ್ಯ ಸರ್ಕಾರ ಯಾವ ಪ್ರಕರಣವನ್ನೂ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ನಾವು ರಾಜಕೀಯ ತೀಟೆ ತೀರಿಸಿಕೊಳ್ಳಲು ಬಂದಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕೋ ಸಾಧ್ಯತೆ ಇದೆ ಎಂದು ಗುಡುಗಿದರು.

ಇದನ್ನೂ ಓದಿ: KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯ ಮೂರು ರಾಜ್ಯಗಳ ರೈತರಿಗೆ ಅನುಕೂಲವಾಗುವ ಜಲಾಶಯವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಿದೆ. ಈ ಬಾರಿ ಸಾಕಷ್ಟು ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು ಎಂದರು.

ಎರಡು ಬೆಳೆ ಬೆಳೆಯಬಹುದು ಎಂದು ರೈತರಿಗೆ ಖುಷಿಯಾಗಿತ್ತು. ನಾನು ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದ್ದಕ್ಕೆ ಈ ಘಟನೆಯಾಗಿದೆ. ಆದರೆ ಈ ಘಟನೆಗೆ ಯಾರೂ ಹೊಣೆಗಾರರಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರಿಗೆ ಜಲ, ಮತ್ತು ರೈತರ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಸಂಪನ್ಮೂಲದ ಬಗ್ಗೆ ಮಾತ್ರ ಆಸಕ್ತಿ. ಗೇಟ್ ಕಿತ್ತು ಹೋಗಿರೋದಕ್ಕೆ ರಾಜ್ಯ ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಚೀಫ್ ಇಂಜಿನಿಯರ್ ನೇಮಕಾತಿ ಮಾಡಿಲ್ಲ. ನಾವು ರಾಜಕೀಯ ಮಾಡೋದಕ್ಕೆ ಅಲ್ಲ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕು ಎಂಬುದು ಒತ್ತಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಹೇಳಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು