B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)

B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)


ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ
ಸೋಮನಾಳ ಗ್ರಾಮದಲ್ಲಿನ ಮೃತ ಪಿಎಸ್ಐ ಪರಶುರಾಮ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ B.Y ವಿಜಯೇಂದ್ರ (B.Y Vijayendra) ತರಾಟೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಘಟನೆ ನಡೆದು 11 ದಿನವಾಗಿದೆ. ಆದ್ರೆ ಅಪರಾಧಿಗಳ ಬಂಧನವಾಗಿಲ್ಲ. ಅಪರಾಧಿ ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಶಾಸಕ ಚೆನ್ನರೆಡ್ಡಿ‌ಗೆ ಟಾಂಗ್ ಕೊಟ್ಟರು.

Join Our telegram: https://t.me/dcgkannada

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಕೂಡಲೇ ಆರೋಪಿಗಳ ಬಂಧನವಾಗಬೇಕು. ಪರಶುರಾಮ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಪರಶುರಾಮ್ ಪತ್ನಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ನೀಡಬೇಕು ಎಂದು ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ರಾಜ್ಯ ಸರ್ಕಾರ ಯಾವ ಪ್ರಕರಣವನ್ನೂ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ನಾವು ರಾಜಕೀಯ ತೀಟೆ ತೀರಿಸಿಕೊಳ್ಳಲು ಬಂದಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕೋ ಸಾಧ್ಯತೆ ಇದೆ ಎಂದು ಗುಡುಗಿದರು.

ಇದನ್ನೂ ಓದಿ: KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯ ಮೂರು ರಾಜ್ಯಗಳ ರೈತರಿಗೆ ಅನುಕೂಲವಾಗುವ ಜಲಾಶಯವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಿದೆ. ಈ ಬಾರಿ ಸಾಕಷ್ಟು ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು ಎಂದರು.

ಎರಡು ಬೆಳೆ ಬೆಳೆಯಬಹುದು ಎಂದು ರೈತರಿಗೆ ಖುಷಿಯಾಗಿತ್ತು. ನಾನು ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದ್ದಕ್ಕೆ ಈ ಘಟನೆಯಾಗಿದೆ. ಆದರೆ ಈ ಘಟನೆಗೆ ಯಾರೂ ಹೊಣೆಗಾರರಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರಿಗೆ ಜಲ, ಮತ್ತು ರೈತರ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಸಂಪನ್ಮೂಲದ ಬಗ್ಗೆ ಮಾತ್ರ ಆಸಕ್ತಿ. ಗೇಟ್ ಕಿತ್ತು ಹೋಗಿರೋದಕ್ಕೆ ರಾಜ್ಯ ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಚೀಫ್ ಇಂಜಿನಿಯರ್ ನೇಮಕಾತಿ ಮಾಡಿಲ್ಲ. ನಾವು ರಾಜಕೀಯ ಮಾಡೋದಕ್ಕೆ ಅಲ್ಲ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕು ಎಂಬುದು ಒತ್ತಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಹೇಳಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ