Muddebihal: ಸೇವೆಯಲ್ಲಿ ನಮ್ಮ ಸಾಧನೆಯೇ ಮಾತನಾಡಬೇಕು-ಪಾಟೀಲ್

Muddebihal: ಸೇವೆಯಲ್ಲಿ ನಮ್ಮ ಸಾಧನೆಯೇ ಮಾತನಾಡಬೇಕು-ಪಾಟೀಲ್


ಮುದ್ದೇಬಿಹಾಳ : ಸರ್ಕಾರದ ಸೇವೆಯಲ್ಲಿರುವ ಸಮಯದಲ್ಲಿ ಸಾರ್ವಜನಿಕರಿಂದ ಟೀಕೆ, ಟಿಪ್ಪಣಿಗಳು ಬರುವುದು ಸಹಜ. ಆದರೆ ಅವುಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ನಾವು ಜನರಿಗೆ ಸೇವೆ ನೀಡಬೇಕು ಎಂದು ಹೆಸ್ಕಾಂ ಹಿರಿಯ ಶಾಖಾಧಿಕಾರಿ ಎಸ್.ಎಸ್.ಪಾಟೀಲ್ ಹೇಳಿದರು.

ಬೇರೆಡೆ ವರ್ಗಾವಣೆಗೊಂಡ ಪ್ರಯುಕ್ತ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

Join Our Telegram: https://t.me/dcgkannada

ಮುದ್ದೇಬಿಹಾಳ ನಗರದಲ್ಲಿ ಸೇವೆ ಸಲ್ಲಿಸುವ ಸಮಯದಲ್ಲಿ ಜನರು ನೀಡಿದ ಸಹಕಾರ,ನಮ್ಮ ಇಲಾಖೆಯ ಸಿಬ್ಬಂದಿ ನೀಡಿದ ಗೌರವ ಎಂದಿಗೂ ಮರೆಯಲಾರೆ ಎಂದರು.

ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ, ಲೆಕ್ಕಾಧಿಕಾರಿ ಬಿ.ಎ.ಮಡಿವಾಳರ ಮಾತನಾಡಿ, ಪಾಟೀಲರು ಸೇವೆಯಲ್ಲಿದ್ದಾರೆಂದರೆ ಅಲ್ಲಿ ಸಮಸ್ಯೆಗಳಿಗೆ ಆಸ್ಪದವೇ ಇರುತ್ತಿರಲಿಲ್ಲ. ಎಲ್ಲರೊಂದಿಗೆ ನಗುಮೊಗದಿಂದ ಸೌಜನ್ಯದಿಂದ ಸೇವೆ ಸಲ್ಲಿಸುತ್ತಿದ್ದರು ಎಂದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ತಂಗಡಗಿ ಶಾಖಾಧಿಕಾರಿ ಎಂ.ಎಸ್.ತೆಗ್ಗಿನಮಠ, ಆರ್.ಎಂ.ನಾಯ್ಕಮಕ್ಕಳ, ರಾಹುಲ್ ಪಾದಗಟ್ಟಿ ಮಾತನಾಡಿದರು.

ಸೆಕ್ಷನ್ ಅಧಿಕಾರಿಗಳಾದ ಸಂತೋಷ ನಡಗೇರಿ, ಸೋಮು ಗಸ್ತಿಗಾರ, ಆರ್.ಬಿ.ಹಿರೇಮಠ,ಸಚಿನ್ ಮೇಲ್ಮನಿ,ಅಣ್ಣಯ್ಯ ಸರಗಣಾಚಾರಿ, ಬಿ.ಸಿ.ಹಿರೇಮಠಮಲ್ಲಣ್ಣ ಮಡಿಕೇಶ್ವರ ಸೇರಿದಂತೆ ಹಲವರು ಇದ್ದರು.

ವಿದ್ಯುತ್ ಗುತ್ತಿಗೆದಾರರು, ಸಿಬ್ಬಂದಿ, ಲೈನಮನ್‌ಗಳು,ಹೊರಗುತ್ತಿಗೆ ಸಿಬ್ಬಂದಿ ವರ್ಗಾವಣೆಗೊಂಡ ಪಾಟೀಲ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ