Muddebihal: ಸೇವೆಯಲ್ಲಿ ನಮ್ಮ ಸಾಧನೆಯೇ ಮಾತನಾಡಬೇಕು-ಪಾಟೀಲ್

Muddebihal: ಸೇವೆಯಲ್ಲಿ ನಮ್ಮ ಸಾಧನೆಯೇ ಮಾತನಾಡಬೇಕು-ಪಾಟೀಲ್


ಮುದ್ದೇಬಿಹಾಳ : ಸರ್ಕಾರದ ಸೇವೆಯಲ್ಲಿರುವ ಸಮಯದಲ್ಲಿ ಸಾರ್ವಜನಿಕರಿಂದ ಟೀಕೆ, ಟಿಪ್ಪಣಿಗಳು ಬರುವುದು ಸಹಜ. ಆದರೆ ಅವುಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ನಾವು ಜನರಿಗೆ ಸೇವೆ ನೀಡಬೇಕು ಎಂದು ಹೆಸ್ಕಾಂ ಹಿರಿಯ ಶಾಖಾಧಿಕಾರಿ ಎಸ್.ಎಸ್.ಪಾಟೀಲ್ ಹೇಳಿದರು.

ಬೇರೆಡೆ ವರ್ಗಾವಣೆಗೊಂಡ ಪ್ರಯುಕ್ತ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

Join Our Telegram: https://t.me/dcgkannada

ಮುದ್ದೇಬಿಹಾಳ ನಗರದಲ್ಲಿ ಸೇವೆ ಸಲ್ಲಿಸುವ ಸಮಯದಲ್ಲಿ ಜನರು ನೀಡಿದ ಸಹಕಾರ,ನಮ್ಮ ಇಲಾಖೆಯ ಸಿಬ್ಬಂದಿ ನೀಡಿದ ಗೌರವ ಎಂದಿಗೂ ಮರೆಯಲಾರೆ ಎಂದರು.

ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ, ಲೆಕ್ಕಾಧಿಕಾರಿ ಬಿ.ಎ.ಮಡಿವಾಳರ ಮಾತನಾಡಿ, ಪಾಟೀಲರು ಸೇವೆಯಲ್ಲಿದ್ದಾರೆಂದರೆ ಅಲ್ಲಿ ಸಮಸ್ಯೆಗಳಿಗೆ ಆಸ್ಪದವೇ ಇರುತ್ತಿರಲಿಲ್ಲ. ಎಲ್ಲರೊಂದಿಗೆ ನಗುಮೊಗದಿಂದ ಸೌಜನ್ಯದಿಂದ ಸೇವೆ ಸಲ್ಲಿಸುತ್ತಿದ್ದರು ಎಂದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ತಂಗಡಗಿ ಶಾಖಾಧಿಕಾರಿ ಎಂ.ಎಸ್.ತೆಗ್ಗಿನಮಠ, ಆರ್.ಎಂ.ನಾಯ್ಕಮಕ್ಕಳ, ರಾಹುಲ್ ಪಾದಗಟ್ಟಿ ಮಾತನಾಡಿದರು.

ಸೆಕ್ಷನ್ ಅಧಿಕಾರಿಗಳಾದ ಸಂತೋಷ ನಡಗೇರಿ, ಸೋಮು ಗಸ್ತಿಗಾರ, ಆರ್.ಬಿ.ಹಿರೇಮಠ,ಸಚಿನ್ ಮೇಲ್ಮನಿ,ಅಣ್ಣಯ್ಯ ಸರಗಣಾಚಾರಿ, ಬಿ.ಸಿ.ಹಿರೇಮಠಮಲ್ಲಣ್ಣ ಮಡಿಕೇಶ್ವರ ಸೇರಿದಂತೆ ಹಲವರು ಇದ್ದರು.

ವಿದ್ಯುತ್ ಗುತ್ತಿಗೆದಾರರು, ಸಿಬ್ಬಂದಿ, ಲೈನಮನ್‌ಗಳು,ಹೊರಗುತ್ತಿಗೆ ಸಿಬ್ಬಂದಿ ವರ್ಗಾವಣೆಗೊಂಡ ಪಾಟೀಲ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ