ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಸಗಣಿ ಎರಚಿಕೊಂಡು ಓಕುಳಿ ಆಟ! ಗದಗನಲ್ಲೊಂದು ವಿಶಿಷ್ಟ ಆಚರಣೆ (ವಿಡಿಯೋ ನೋಡಿ)

ಗದಗ : ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

Join Our Telegram: https://t.me/dcgkannada

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ. ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಇದನ್ನೂ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ. ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ