Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ

Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ


ಮುದ್ದೇಬಿಹಾಳ: ಸಂಘ, ಸಂಸ್ಥೆಗಳು ಎಲ್ಲರನ್ನೂ ಸೇರಿಸಿಕೊಂಡು, ಸರ್ವರ ಏಳ್ಗೆಗೆ ಶ್ರಮಿಸುವ ಕೆಲಸ ಮಾಡಬೇಕು ಎಂದು ದೇವಿಕಾ ಸುಬ್ಬರಾವ್ ಫೌಂಡೇಶನ್ ಅಧ್ಯಕ್ಷೆ, ಸಮಾಜ ಸೇವಕಿ ಪಲ್ಲವಿ ನಾಡಗೌಡ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ಪ್ರಗತಿ ಜೆಸಿ ಸಂಸ್ಥೆಯ 2024-25 ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

Join Our Telegram: https://t.me/dcgkannada

ಸಮಾಜಮುಖಿ ಕೆಲಸಗಳು ಮತ್ತು ಪಾರದರ್ಶಕತೆ ಸಂಘ ಸಂಸ್ಥೆಗಳ ಮೇಲಿನ ನಂಬಿಕೆಗೆ ಮುಖ್ಯ ಕಾರಣವಾಗುತ್ತವೆ. ಜೆಸಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಿಂದ ಅತ್ಯುತ್ತಮ ಶಿಕ್ಷಣ ನೂರಾರು ಮಕ್ಕಳಿಗೆ ಲಭಿಸುತ್ತಿರುವುದು ಸಂತಸದ ವಿಷಯ. ಶಿಕ್ಷಣದಿಂದ ದೊರಕುವ ಶಕ್ತಿ ದೊಡ್ಡದು. ಎಂದರು.

ಅತಿಥಿಗಳಾಗಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಒಂದು ಸಂಸ್ಥೆಯ ನೇತೃತ್ವ ವಹಿಸಿಕೊಂಡ ಕೆಲವರು, ಕೆಲವೇ ದಿನಗಳಲ್ಲಿ ಆ ಇಡೀ ಸಂಸ್ಥೆಯನ್ನು ತಮ್ಮ ಕುಟುಂಬದ ಆಸ್ತಿಯನ್ನಾಗಿಸಿಕೊಂಡ ಜ್ವಲಂತ ಉದಾಹರಣೆಗಳು ನಮ್ಮ ಮುಂದೆ ಇವೆ. ಆದರೆ ಜೆಸಿ ಸಂಸ್ಥೆಯ ಸದಸ್ಯರು ಫಲಾಪೇಕ್ಷೆ ಇಲ್ಲದೇ ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎನ್ನುವ ತತ್ವದಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಭೆಯಲ್ಲಿ ಬೆಂಗಳೂರು ಮಹಾ ನಗರಸಭೆಯ ವಿಶೇಷ ಆಯುಕ್ತ ಶಿವಾನಂದ ಕಲಕೇರಿ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಆಪ್ತ ಕಾರ್ಯದರ್ಶಿ ಶ್ರೀಶೈಲ ಬಿದರಕುಂದಿ ಮಾತನಾಡಿದರು.

ಅಹಲ್ಯಾದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಜೆಸಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ತಡಸದ ಅಧ್ಯಕ್ಷರಾದ ಗುರುಲಿಂಗಪ್ಪಗೌಡ ಪಾಟೀಲ, ನಿಕಟಪೂರ್ವ ಅಧ್ಯಕ್ಷರಾದ ಮಹಾಬಲೇಶ್ವರ ಶಿ.ಗಡೇದ, ಕಾರ್ಯದರ್ಶಿ ಮುತ್ತು ಕಡಿ ವೇದಿಕೆಯಲ್ಲಿದ್ದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶರಣು ಅಯ್ಯಪ್ಪ ಸಜ್ಜನ ಹಾಗೂ ಕಾರ್ಯದರ್ಶಿಯಾಗಿ ಸುನೀಲ್ ಇಲ್ಲೂರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜೆಸಿ ಸಂಸ್ಥೆಗೆ ಸಲಹಾ ಸಮಿತಿಯ ಸದಸ್ಯರನ್ನಾಗಿ ಬಾಲಾಜಿ ಶುಗರ್ಸನ ರಾಹುಲ ಪಾಟೀಲ ಹಾಗೂ ಆರ್.ಎಸ್.ಪಾಟೀಲ ಅವರನ್ನು ಸೇರಿಸಿಕೊಳ್ಳಲಾಯಿತು.

ಸಮಾರಂಭದಲ್ಲಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಜೆಸಿ ಸದಸ್ಯರನ್ನು ಹಾಗೂ ಮಕ್ಕಳನ್ನು ಸನ್ಮಾನಿಸಲಾಯಿತು.

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿಯ ಭಾವೈಕ್ಯತೆ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಂಘ, ಸಂಸ್ಥೆಗಳು ದೀನರ, ದಲಿತರ, ದುರ್ಬಲರ, ನೊಂದವರ ಜೀವನಾಡಿಯಾಗಿ ಬೆಳೆಯಬೇಕು. ಸಮಾಜದ ಸರ್ವರ ಕಲ್ಯಾಣಕ್ಕೆ ಸಮಾಜ ಸೇವಾದೀಕ್ಷೆ ಪಡೆಯಬೇಕು ಎಂದರು.

ಜೆಸಿ ಶಾಲೆಯ ಮಕ್ಕಳು ಪ್ರಾರ್ಥಿಸಿದರು. ಡಾ.ವೀರೇಶ ಪಾಟೀಲ ಸ್ವಾಗತಿಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಎಸ್.ಎಸ್.ಹೂಗಾರ ಹಾಗೂ ಮಹಾಬಲೇಶ್ವರ ಗಡೇದ ನಿರೂಪಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ