Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ

Muddebihal: ಶಿಕ್ಷಣ ಯಾರಿಂದಲೂ ಕಸಿದುಕೊಳ್ಳಲಾಗದ ಆಸ್ತಿ: ಪಲ್ಲವಿ

Ad
Ad


ಮುದ್ದೇಬಿಹಾಳ: ಸಂಘ, ಸಂಸ್ಥೆಗಳು ಎಲ್ಲರನ್ನೂ ಸೇರಿಸಿಕೊಂಡು, ಸರ್ವರ ಏಳ್ಗೆಗೆ ಶ್ರಮಿಸುವ ಕೆಲಸ ಮಾಡಬೇಕು ಎಂದು ದೇವಿಕಾ ಸುಬ್ಬರಾವ್ ಫೌಂಡೇಶನ್ ಅಧ್ಯಕ್ಷೆ, ಸಮಾಜ ಸೇವಕಿ ಪಲ್ಲವಿ ನಾಡಗೌಡ ಹೇಳಿದರು.

Ad
Ad

ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ಪ್ರಗತಿ ಜೆಸಿ ಸಂಸ್ಥೆಯ 2024-25 ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

Join Our Telegram: https://t.me/dcgkannada

ಸಮಾಜಮುಖಿ ಕೆಲಸಗಳು ಮತ್ತು ಪಾರದರ್ಶಕತೆ ಸಂಘ ಸಂಸ್ಥೆಗಳ ಮೇಲಿನ ನಂಬಿಕೆಗೆ ಮುಖ್ಯ ಕಾರಣವಾಗುತ್ತವೆ. ಜೆಸಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಿಂದ ಅತ್ಯುತ್ತಮ ಶಿಕ್ಷಣ ನೂರಾರು ಮಕ್ಕಳಿಗೆ ಲಭಿಸುತ್ತಿರುವುದು ಸಂತಸದ ವಿಷಯ. ಶಿಕ್ಷಣದಿಂದ ದೊರಕುವ ಶಕ್ತಿ ದೊಡ್ಡದು. ಎಂದರು.

ಅತಿಥಿಗಳಾಗಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಒಂದು ಸಂಸ್ಥೆಯ ನೇತೃತ್ವ ವಹಿಸಿಕೊಂಡ ಕೆಲವರು, ಕೆಲವೇ ದಿನಗಳಲ್ಲಿ ಆ ಇಡೀ ಸಂಸ್ಥೆಯನ್ನು ತಮ್ಮ ಕುಟುಂಬದ ಆಸ್ತಿಯನ್ನಾಗಿಸಿಕೊಂಡ ಜ್ವಲಂತ ಉದಾಹರಣೆಗಳು ನಮ್ಮ ಮುಂದೆ ಇವೆ. ಆದರೆ ಜೆಸಿ ಸಂಸ್ಥೆಯ ಸದಸ್ಯರು ಫಲಾಪೇಕ್ಷೆ ಇಲ್ಲದೇ ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎನ್ನುವ ತತ್ವದಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಭೆಯಲ್ಲಿ ಬೆಂಗಳೂರು ಮಹಾ ನಗರಸಭೆಯ ವಿಶೇಷ ಆಯುಕ್ತ ಶಿವಾನಂದ ಕಲಕೇರಿ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಆಪ್ತ ಕಾರ್ಯದರ್ಶಿ ಶ್ರೀಶೈಲ ಬಿದರಕುಂದಿ ಮಾತನಾಡಿದರು.

ಅಹಲ್ಯಾದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಜೆಸಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ತಡಸದ ಅಧ್ಯಕ್ಷರಾದ ಗುರುಲಿಂಗಪ್ಪಗೌಡ ಪಾಟೀಲ, ನಿಕಟಪೂರ್ವ ಅಧ್ಯಕ್ಷರಾದ ಮಹಾಬಲೇಶ್ವರ ಶಿ.ಗಡೇದ, ಕಾರ್ಯದರ್ಶಿ ಮುತ್ತು ಕಡಿ ವೇದಿಕೆಯಲ್ಲಿದ್ದರು.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶರಣು ಅಯ್ಯಪ್ಪ ಸಜ್ಜನ ಹಾಗೂ ಕಾರ್ಯದರ್ಶಿಯಾಗಿ ಸುನೀಲ್ ಇಲ್ಲೂರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಜೆಸಿ ಸಂಸ್ಥೆಗೆ ಸಲಹಾ ಸಮಿತಿಯ ಸದಸ್ಯರನ್ನಾಗಿ ಬಾಲಾಜಿ ಶುಗರ್ಸನ ರಾಹುಲ ಪಾಟೀಲ ಹಾಗೂ ಆರ್.ಎಸ್.ಪಾಟೀಲ ಅವರನ್ನು ಸೇರಿಸಿಕೊಳ್ಳಲಾಯಿತು.

ಸಮಾರಂಭದಲ್ಲಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಜೆಸಿ ಸದಸ್ಯರನ್ನು ಹಾಗೂ ಮಕ್ಕಳನ್ನು ಸನ್ಮಾನಿಸಲಾಯಿತು.

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿಯ ಭಾವೈಕ್ಯತೆ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಂಘ, ಸಂಸ್ಥೆಗಳು ದೀನರ, ದಲಿತರ, ದುರ್ಬಲರ, ನೊಂದವರ ಜೀವನಾಡಿಯಾಗಿ ಬೆಳೆಯಬೇಕು. ಸಮಾಜದ ಸರ್ವರ ಕಲ್ಯಾಣಕ್ಕೆ ಸಮಾಜ ಸೇವಾದೀಕ್ಷೆ ಪಡೆಯಬೇಕು ಎಂದರು.

ಜೆಸಿ ಶಾಲೆಯ ಮಕ್ಕಳು ಪ್ರಾರ್ಥಿಸಿದರು. ಡಾ.ವೀರೇಶ ಪಾಟೀಲ ಸ್ವಾಗತಿಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಎಸ್.ಎಸ್.ಹೂಗಾರ ಹಾಗೂ ಮಹಾಬಲೇಶ್ವರ ಗಡೇದ ನಿರೂಪಿಸಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500