Accident news Accident board on road

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ ಚಾಲಕ. ಕೊಲೆ ಸಂಬಂಧ ಮಧ್ಯಪ್ರದೇಶ ಮೂಲದ ಸಹದೇವ ಆರ್ಯ ಅಲಿಯಾಸ್ ಬಾಬು(29 ವರ್ಷ), ಸುನೀಲ್ ನಾವೇ(20 ವರ್ಷ), ದಿನೇಶ್ (25 ವರ್ಷ) ಮತ್ತು ಅಲ್ವೇಶ್ ಪಾನ್ಸೆ(20 ವರ್ಷ) ಹಾಗೂ ಸಂಜಯ್ ಕಾಜೆ(21 ವರ್ಷ) ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Join Our Telegram: https://t.me/dcgkannada

ಘಟನೆಯ ವಿವರ: ಕೊಲೆಯಾದ ಸುರೇಶ್ ಮತ್ತು ಸಂಬಂಧಿ ರವಿಚಂದ್ರನ್ 3 ತಿಂಗಳಿಂದ ಅಮೃತ್‌ ಬೋರ್‌ವೆಲ್‌ ಕಲ್ಕಿ ಎಂಟರ್‌ಪ್ರೈಸಸ್‌ನಲ್ಲಿ ಬೋರ್ ವೆಲ್ ಲಾರಿ ಚಾಲಕ ಹಾಗೂ ಡ್ರಿಲ್ಲಿಂಗ್ ಆಪರೇಟ‌ರ್ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಿಂಗಸಂದ್ರದ ಎಇಸಿಎಲ್‌ ಲೇಔಟ್‌ನ ನಿವೇಶನವೊಂದರಲ್ಲಿ ಬೋರ್ ವೆಲ್ ಕೊರೆಯಲು ಸುರೇಶ್, ರವಿಚಂದ್ರನ್ ಹಾಗೂ ಆರೋಪಿಗಳು ಬಂದಿದ್ದಾರೆ.

ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಯುವ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಕೆಲಸ ಮುಂದುವರೆಸಲು ತೀರ್ಮಾನಿಸಿದ್ದಾರೆ. ನಿವೇಶನದಲ್ಲಿದ್ದ ಶೆಡ್‌ನಲ್ಲಿ ರಾತ್ರಿ ಉಳಿದುಕೊಂಡಿದ್ದಾರೆ.

ಈ ವೇಳೆ ಆರೋಪಿ ಸಹದೇವ ಅಡುಗೆ ಮಾಡಲು ಆರಂಭಿಸಿದ್ದಾನೆ. ಆಗ ಬೋರ್‌ವೆಲ್‌ ಲಾರಿ ಚಾಲಕ (Lorry driver murder) ಸುರೇಶ್, ನಿನಗೆ ಸರಿಯಾಗಿ ಕೆಲಸ ಮಾಡಲೂ ಬರುವುದಿಲ್ಲ, ಅಡುಗೆ ಮಾಡಲೂ ಬರುವುದಿಲ್ಲ ಎಂದು ತಮಿಳಿನಲ್ಲಿ ಸಹದೇವನನ್ನು ನಿಂದಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ಬಳಿಕ ಇತರೆ ಕಾರ್ಮಿಕರು ಜಗಳ ಬಿಡಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ಬಳಿಕ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಿ ಶೆಡ್‌ನಲ್ಲಿ ನಿದ್ದೆಗೆ ಜಾರಿದ್ದಾರೆ.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ರಾಡ್‌ನಿಂದ ತಲೆಗೆ ಹಲ್ಲೆಗೈದು ಕೊಲೆ: ಲಾರಿ ಚಾಲಕ ಸುರೇಶ್ ಗಾಢ ನಿದ್ದೆಯಲ್ಲಿದ್ದಾಗ ರಾತ್ರಿ ಸುಮಾರು 11.30ಕ್ಕೆ ಕಾರ್ಮಿಕರಾದ ಸಹದೇವ ಹಾಗೂ ಇತರರು ಕಬ್ಬಿಣದ ರಾಡ್‌ ಹಾಗೂ ಸುತ್ತಿಗೆಯಿಂದ ಸುರೇಶ್ ತಲೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುರೇಶ್ ಕೊಲೆ ವಿಚಾರ ಗೊತ್ತಾಗಿ ಸಂಬಂಧಿ ರವಿಚಂದ್ರನ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಹತ್ಯೆ ಬಳಿಕ ತವರು ರಾಜ್ಯಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ