Accident news Accident board on road

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ ಚಾಲಕ. ಕೊಲೆ ಸಂಬಂಧ ಮಧ್ಯಪ್ರದೇಶ ಮೂಲದ ಸಹದೇವ ಆರ್ಯ ಅಲಿಯಾಸ್ ಬಾಬು(29 ವರ್ಷ), ಸುನೀಲ್ ನಾವೇ(20 ವರ್ಷ), ದಿನೇಶ್ (25 ವರ್ಷ) ಮತ್ತು ಅಲ್ವೇಶ್ ಪಾನ್ಸೆ(20 ವರ್ಷ) ಹಾಗೂ ಸಂಜಯ್ ಕಾಜೆ(21 ವರ್ಷ) ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Join Our Telegram: https://t.me/dcgkannada

ಘಟನೆಯ ವಿವರ: ಕೊಲೆಯಾದ ಸುರೇಶ್ ಮತ್ತು ಸಂಬಂಧಿ ರವಿಚಂದ್ರನ್ 3 ತಿಂಗಳಿಂದ ಅಮೃತ್‌ ಬೋರ್‌ವೆಲ್‌ ಕಲ್ಕಿ ಎಂಟರ್‌ಪ್ರೈಸಸ್‌ನಲ್ಲಿ ಬೋರ್ ವೆಲ್ ಲಾರಿ ಚಾಲಕ ಹಾಗೂ ಡ್ರಿಲ್ಲಿಂಗ್ ಆಪರೇಟ‌ರ್ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಿಂಗಸಂದ್ರದ ಎಇಸಿಎಲ್‌ ಲೇಔಟ್‌ನ ನಿವೇಶನವೊಂದರಲ್ಲಿ ಬೋರ್ ವೆಲ್ ಕೊರೆಯಲು ಸುರೇಶ್, ರವಿಚಂದ್ರನ್ ಹಾಗೂ ಆರೋಪಿಗಳು ಬಂದಿದ್ದಾರೆ.

ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಯುವ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಕೆಲಸ ಮುಂದುವರೆಸಲು ತೀರ್ಮಾನಿಸಿದ್ದಾರೆ. ನಿವೇಶನದಲ್ಲಿದ್ದ ಶೆಡ್‌ನಲ್ಲಿ ರಾತ್ರಿ ಉಳಿದುಕೊಂಡಿದ್ದಾರೆ.

ಈ ವೇಳೆ ಆರೋಪಿ ಸಹದೇವ ಅಡುಗೆ ಮಾಡಲು ಆರಂಭಿಸಿದ್ದಾನೆ. ಆಗ ಬೋರ್‌ವೆಲ್‌ ಲಾರಿ ಚಾಲಕ (Lorry driver murder) ಸುರೇಶ್, ನಿನಗೆ ಸರಿಯಾಗಿ ಕೆಲಸ ಮಾಡಲೂ ಬರುವುದಿಲ್ಲ, ಅಡುಗೆ ಮಾಡಲೂ ಬರುವುದಿಲ್ಲ ಎಂದು ತಮಿಳಿನಲ್ಲಿ ಸಹದೇವನನ್ನು ನಿಂದಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ಬಳಿಕ ಇತರೆ ಕಾರ್ಮಿಕರು ಜಗಳ ಬಿಡಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ಬಳಿಕ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಿ ಶೆಡ್‌ನಲ್ಲಿ ನಿದ್ದೆಗೆ ಜಾರಿದ್ದಾರೆ.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ರಾಡ್‌ನಿಂದ ತಲೆಗೆ ಹಲ್ಲೆಗೈದು ಕೊಲೆ: ಲಾರಿ ಚಾಲಕ ಸುರೇಶ್ ಗಾಢ ನಿದ್ದೆಯಲ್ಲಿದ್ದಾಗ ರಾತ್ರಿ ಸುಮಾರು 11.30ಕ್ಕೆ ಕಾರ್ಮಿಕರಾದ ಸಹದೇವ ಹಾಗೂ ಇತರರು ಕಬ್ಬಿಣದ ರಾಡ್‌ ಹಾಗೂ ಸುತ್ತಿಗೆಯಿಂದ ಸುರೇಶ್ ತಲೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುರೇಶ್ ಕೊಲೆ ವಿಚಾರ ಗೊತ್ತಾಗಿ ಸಂಬಂಧಿ ರವಿಚಂದ್ರನ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಹತ್ಯೆ ಬಳಿಕ ತವರು ರಾಜ್ಯಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಆಲಮೇಲ: ಪಟ್ಟಣದಲ್ಲಿ ಯುವಕನನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಫಾರೂಕ ಆಮದಸಾಬ ಲಾಳಸಂಗಿ (26) ಕೊಲೆಯಾದ ವ್ಯಕ್ತಿ. ಕೊಲೆಗೆ ಅನೈತಿಕ ಸಂಭದದ ಶಂಕೆ ವ್ಯಕ್ತವಾಗಿದೆ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂದಗಿ ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಪಿಎಸ್ಐ ಅರವಿಂದ ಅಂಗಡಿ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ವಾನದಳ ಸಿಬ್ಬಂದಿ ಆಗಮಿಸಿ ಶೋಧ ನಡೆಸಿದ್ದಾರೆ.

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು