Accident news Accident board on road

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ ಚಾಲಕ. ಕೊಲೆ ಸಂಬಂಧ ಮಧ್ಯಪ್ರದೇಶ ಮೂಲದ ಸಹದೇವ ಆರ್ಯ ಅಲಿಯಾಸ್ ಬಾಬು(29 ವರ್ಷ), ಸುನೀಲ್ ನಾವೇ(20 ವರ್ಷ), ದಿನೇಶ್ (25 ವರ್ಷ) ಮತ್ತು ಅಲ್ವೇಶ್ ಪಾನ್ಸೆ(20 ವರ್ಷ) ಹಾಗೂ ಸಂಜಯ್ ಕಾಜೆ(21 ವರ್ಷ) ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Join Our Telegram: https://t.me/dcgkannada

ಘಟನೆಯ ವಿವರ: ಕೊಲೆಯಾದ ಸುರೇಶ್ ಮತ್ತು ಸಂಬಂಧಿ ರವಿಚಂದ್ರನ್ 3 ತಿಂಗಳಿಂದ ಅಮೃತ್‌ ಬೋರ್‌ವೆಲ್‌ ಕಲ್ಕಿ ಎಂಟರ್‌ಪ್ರೈಸಸ್‌ನಲ್ಲಿ ಬೋರ್ ವೆಲ್ ಲಾರಿ ಚಾಲಕ ಹಾಗೂ ಡ್ರಿಲ್ಲಿಂಗ್ ಆಪರೇಟ‌ರ್ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಿಂಗಸಂದ್ರದ ಎಇಸಿಎಲ್‌ ಲೇಔಟ್‌ನ ನಿವೇಶನವೊಂದರಲ್ಲಿ ಬೋರ್ ವೆಲ್ ಕೊರೆಯಲು ಸುರೇಶ್, ರವಿಚಂದ್ರನ್ ಹಾಗೂ ಆರೋಪಿಗಳು ಬಂದಿದ್ದಾರೆ.

ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಯುವ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಕೆಲಸ ಮುಂದುವರೆಸಲು ತೀರ್ಮಾನಿಸಿದ್ದಾರೆ. ನಿವೇಶನದಲ್ಲಿದ್ದ ಶೆಡ್‌ನಲ್ಲಿ ರಾತ್ರಿ ಉಳಿದುಕೊಂಡಿದ್ದಾರೆ.

ಈ ವೇಳೆ ಆರೋಪಿ ಸಹದೇವ ಅಡುಗೆ ಮಾಡಲು ಆರಂಭಿಸಿದ್ದಾನೆ. ಆಗ ಬೋರ್‌ವೆಲ್‌ ಲಾರಿ ಚಾಲಕ (Lorry driver murder) ಸುರೇಶ್, ನಿನಗೆ ಸರಿಯಾಗಿ ಕೆಲಸ ಮಾಡಲೂ ಬರುವುದಿಲ್ಲ, ಅಡುಗೆ ಮಾಡಲೂ ಬರುವುದಿಲ್ಲ ಎಂದು ತಮಿಳಿನಲ್ಲಿ ಸಹದೇವನನ್ನು ನಿಂದಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ಬಳಿಕ ಇತರೆ ಕಾರ್ಮಿಕರು ಜಗಳ ಬಿಡಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ಬಳಿಕ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಿ ಶೆಡ್‌ನಲ್ಲಿ ನಿದ್ದೆಗೆ ಜಾರಿದ್ದಾರೆ.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ರಾಡ್‌ನಿಂದ ತಲೆಗೆ ಹಲ್ಲೆಗೈದು ಕೊಲೆ: ಲಾರಿ ಚಾಲಕ ಸುರೇಶ್ ಗಾಢ ನಿದ್ದೆಯಲ್ಲಿದ್ದಾಗ ರಾತ್ರಿ ಸುಮಾರು 11.30ಕ್ಕೆ ಕಾರ್ಮಿಕರಾದ ಸಹದೇವ ಹಾಗೂ ಇತರರು ಕಬ್ಬಿಣದ ರಾಡ್‌ ಹಾಗೂ ಸುತ್ತಿಗೆಯಿಂದ ಸುರೇಶ್ ತಲೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುರೇಶ್ ಕೊಲೆ ವಿಚಾರ ಗೊತ್ತಾಗಿ ಸಂಬಂಧಿ ರವಿಚಂದ್ರನ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಹತ್ಯೆ ಬಳಿಕ ತವರು ರಾಜ್ಯಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಗೌರವ ಸಲ್ಲಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎ.ಗಣೇಶ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಶರಣರು,ನಾಯಕರ ಜಯಂತಿ ಕಾರ್ಯಕ್ರಮಗಳಿಗೆ ಅಷ್ಟೇ ಅಧಿಕಾರಿಗಳು ಆದ್ಯತೆ