Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)


ನವದೆಹಲಿ: ಭಾರತಕ್ಕೆ ಅಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಉಬರ್ ಚಾಲಕನೊಬ್ಬ ಪಾಕಿಸ್ತಾನಿ ಪ್ರಯಾಣಿಕ ಹಾಗೂ ಆತನ ಭಾರತೀಯ ಸ್ನೇಹಿತೆಯನ್ನು ತಡರಾತ್ರಿ ಕ್ಯಾಬ್‌ನಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ.

ಈ ಘಟನೆಯೂ ಆಗಸ್ಟ್ 10ರ ತಡರಾತ್ರಿ ನವದೆಹಲಿಯಲ್ಲಿ ನಡೆದಿದೆ. ಪಾಕಿಸ್ತಾನಿ ಪುರುಷ ಹಾಗೂ ಭಾರತೀಯ ಮಹಿಳೆಯನ್ನು ಕ್ಯಾಬ್‌ನ ಚಾಲಕ ನಡುರಸ್ತೆಯಲ್ಲಿ ಬಿಟ್ಟು ಹೋಗುವುದು ವಿಡಿಯೋದಲ್ಲಿ ಸೆರೆಯಾಗಿದೆ.

Join Our Telegram: https://t.me/dcgkannada

ಕ್ಯಾಬ್ ಚಾಲಕ ಮಹಿಳೆಯನ್ನು ಮುಸ್ಲಿಂ ಎಂದು ಭಾವಿಸಿ, ಇದು ಹಿಂದೂಸ್ತಾನ್, ನಿಮ್ಮ ಪಾಕಿಸ್ತಾನವಲ್ಲ. ನೀವು ಹಲಾಲ್‌ನ ಸಂತತಿಗಳು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದೆಲ್ಲವನ್ನು ರೆಕಾರ್ಡ್ ಮಾಡಿರುವ ಮಹಿಳೆ, “ಈ ವ್ಯಕ್ತಿ ರಾತ್ರಿ 12:30 ಕ್ಕೆ ನಮ್ಮನ್ನು ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದಾನೆ” ಎಂದು ತಿಳಿಸಿದ್ದಾರೆ.

ಮಹಿಳೆ ಹೇಳುವ ಪ್ರಕಾರ, ಆಕೆಯ ಸ್ನೇಹಿತ ಪಾಕಿಸ್ತಾನದಲ್ಲಿರುವ ತನ್ನ ಸಂಬಂಧಿಕರ ಬಗ್ಗೆ ಹಾಗೂ ತಾನು ದೆಹಲಿಗೆ ಬಂದಿರುವ ಬಗ್ಗೆ ಮಾತನಾಡುತ್ತಿದ್ದಾಗ ಕ್ಯಾಬ್ ಚಾಲಕ ತಪ್ಪಾಗಿ ಭಾವಿಸಿ ವಾಗ್ದಾಳಿಯನ್ನು ಪ್ರಾರಂಭಿಸಿದ್ದಾನೆ. ತಮ್ಮ ಮಾತುಗಳನ್ನು ನಿಯಂತ್ರಿಸಿ ಎಂದು ಕೇಳಿದರೂ ಕ್ಯಾಬ್‌ನಿಂದ ಹೊರದಬ್ಬಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನೆಟ್ಟಿಗರು ನೂರಾರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಭಾರತದ ಬಗ್ಗೆ ಅವಹೇಳನ ಮಾಡಿದ ಆರೋಪದ ಬಳಿಕ ಪ್ರಯಾಣಿಕರನ್ನು ಹೊರಹಾಕಿದ್ದಕ್ಕೆ ಹಲವು ಬಳಕೆದಾರರು ಉಬ‌ರ್ ಚಾಲಕನನ್ನು ಹೊಗಳಿದ್ದಾರೆ. ಇನ್ನೂ ಕೆಲವರು ಚಾಲಕ ದುರ್ನಡತೆ ತೋರಿದ್ದಾನೆ. ಇಂತಹ ಚಾಲಕರನ್ನು ಕಂಪನಿ ಅಮಾನತು ಮಾಡಬೇಕೆಂದೂ ಆಗ್ರಹಿಸಿದ್ದಾರೆ.

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ