CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah)ಗೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು, ಸಿಎಂ ಸಿದ್ದರಾಮಯ್ಯ‌(CM SIDDARAMAIAH) ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

Join our Telegram: https://t.me/dcgkannada

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ: Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ