ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

Ad
Ad

Ad
Ad

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500