ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಆಲಮೇಲ: ಪಟ್ಟಣದಲ್ಲಿ ಯುವಕನನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಫಾರೂಕ ಆಮದಸಾಬ ಲಾಳಸಂಗಿ (26) ಕೊಲೆಯಾದ ವ್ಯಕ್ತಿ. ಕೊಲೆಗೆ ಅನೈತಿಕ ಸಂಭದದ ಶಂಕೆ ವ್ಯಕ್ತವಾಗಿದೆ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂದಗಿ ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಪಿಎಸ್ಐ ಅರವಿಂದ ಅಂಗಡಿ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ವಾನದಳ ಸಿಬ್ಬಂದಿ ಆಗಮಿಸಿ ಶೋಧ ನಡೆಸಿದ್ದಾರೆ.

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು