Hunagund Bagalkot lokayukta sp satish chitagubbi

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರೀಕ್ ಪೂರ್ವ ವಸತಿ ನಿಲಯ ಮತ್ತು ಮೆಟ್ರೀಕ್ ನಂತರದ ವಸತಿ ನಿಲಯಕ್ಕೆ (hunagund) ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಸತೀಶ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Telegram: https://t.me/dcgkannada

ಪಟ್ಟಣದ (Hunagund) ಹೊರವಲಯದ ಗುಡ್ಡದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಮುಂದೆ ನಿಂತಿರುವ ಚರಂಡಿ ನೀರಿನ ಗುಂಡಿಯು ಅನೇಕ ವರ್ಷಗಳಿಂದ ನೀರು ನಿಂತು ಮಲಿನಗೊಂಡು ಸೋಳ್ಳೆಯ ಉತ್ಪತ್ತಿಯಾಗುತ್ತಿಯ ತಾಣವಾಗಿದ್ದು, ಇಷ್ಟು ದಿನವಾದರೂ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ ಎಂದು, ಅವ್ಯವಸ್ಥೆಯನ್ನು ಕಂಡ ಲೋಕಾಯುಕ್ತ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಚ್.ಕಟ್ಟಿಮನಿ ಮತ್ತು ಪುರಸಭೆ ಇಲಾಖೆಯ ಸಿಬ್ಬಂದಿಗೆ ತರಾಟೆಯನ್ನು ತೆಗೆದುಕೊಂಡ ಘಟನೆ ನಡೆಯಿತು.

ಇದನ್ನೂ ಓದಿ: BJP Rebels: ಅತೃಪ್ತರ ಮುಂದೆ ಮಂಡಿಯೂರಿದ್ರಾ ಬಿಜೆಪಿ ರಾಜ್ಯಾಧ್ಯಕ್ಷ..? ಬಿ.ವೈ. ವಿಜಯೇಂದ್ರ ಶಾಕಿಂಗ್ ರಿಯಾಕ್ಷನ್..!

ವಿದ್ಯಾರ್ಥಿಗಳ ವಸತಿ ನಿಲಯಗಳ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಊಟದ ಮತ್ತು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ನಮಗೆ ತಿಳಿಸಿ‌ ಎಂದು ಸೂಚಿಸಿದರು.

ವಸತಿ ನಿಲಯದಲ್ಲಿನ ಆಹಾರ ಗುಣಮಟ್ಟ, ಗ್ರಂಥಾಲಯ, ಶುದ್ದನೀರಿನ ಘಟಕ, ವಿದ್ಯಾರ್ಥಿಗಳಿಗೆ ನೀಡುವ ಕಿಟ್, ಶೌಚಾಲಯದ, ಅಡುಗೆ ಕೋಣೆ, ಸ್ವಚ್ಚತೆ, ಹಾಜರಾತಿ ಕುರಿತು ವಸತಿ ನಿಲಯಗಳ ಕಡತಗಳಗಳನ್ನು ಪರೀಶೀಲನೆ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐಗಳಾದ ಬಸವರಾಜ ಮುಕರ್ತಿಹಾಳ, ಎಂ.ಎಚ್.ಬಿದರಿ, ತಹಸೀಲ್ದಾರ ನಿಂಗಪ್ಪ ಬಿರಾದರ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮ್ಯಾನೇಜರ ಎಮ.ಎಚ್.ಕಳ್ಳಿಗುಡ್ಡ ಇದ್ದರು.

ಕಾಸಿಗಾಗಿ ಪೋಸ್ಟಿಂಗ್ ನಿಂದಲೇ ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾಸ್ವಾಮಿ‌ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು