Murder Case Image of murder symbol

Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕೊರಟಗೆರೆ: ಆಸ್ತಿಯ ವಿಚಾರಕ್ಕೆ ತಂದೆಯನ್ನು ಮಗನೇ ಮಚ್ಚಿನಲ್ಲಿ ಕೊಚ್ಚಿ ಬರ್ಬರವಾಗಿ ಕೊಲೆ (Murder) ಮಾಡಿರುವ ದುರ್ಘಟನೆ ಕೊರಟಗೆರೆ ತಾಲೂಕಿನಲ್ಲಿ ಸಂಭವಿಸಿದೆ.

ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದ 75 ವರ್ಷದ ವೆಂಕಟಪ್ಪ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ವೆಂಕಟ್ಟಪ್ಪ ಮೂರೂವರೆ ಎಕರೆ ಆಸ್ತಿ ಹೊಂದಿದ್ದನು. ಇತ್ತೀಚೆಗೆ ಒಂದಿಷ್ಟು ಜಮೀನು ಮಾರಾಟ ಮಾಡಿ ಬಂದ ಹಣವನ್ನು ಮಗಳಿಗೆ ಕೊಟ್ಟಿದ್ದರು. ಹಾಗೂ ಜಮೀನನ್ನೂ ಕೂಡ ಮಗಳ ಹೆಸರಿಗೆ ಬರೆದು ಕೊಟ್ಟಿದ್ದರು.

ಇದೇ ವಿಚಾರವಾಗಿ ಮಗ ಮಗ ಸಿದ್ದಪ್ಪ ಹಾಗೂ ಮೃತ ವೆಂಕಟಪ್ಪ ನಡುವೆ ಹಲವು ಬಾರಿ ಗಲಾಟೆಯಾಗಿದೆ. ಈ ಬಗ್ಗೆ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ಆದರೆ ಆಸ್ತಿಯನ್ನು ಮಗನಿಗೆ ಕೊಡಲು ವೆಂಕಟಪ್ಪ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಇದರಿಂದ ಬೇಸತ್ತು ಸಿದ್ದಪ್ಪ ವೆಂಕಟಪ್ಪನ ತಲೆಗೆ ಮಚ್ಚಿನಿಂದ (Murder) ಬಲವಾಗಿ ಹೊಡೆದಿದ್ದಾನೆ. ಆದರೆ ತೀವ್ರ ರಕ್ತಸ್ರಾವದಿಂದ ವೆಂಕಟಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ಸಿದ್ದಪ್ಪ ನಾಪತ್ತೆಯಾಗಿದ್ದಾನೆ.

ಸದ್ಯ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾಗಿರುವ ಮಗ ಸಿದ್ದಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಶಿಕ್ಷಕಿಯನ್ನು ಮಂಚಕ್ಕೆ ಕರೆದ ಹೆಡ್ ಮಾಸ್ಟ‌ರ್! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಮಂಚಕ್ಕೆ ಕರೆದ ಸರ್ಕಾರಿ ಶಾಲೆಯೊಂದರ ಪ್ರಭಾರ ಮುಖ್ಯ ಶಿಕ್ಷಕನಿಗೆ ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಶಿಕ್ಷಕಿಯನ್ನು ಮಂಚಕ್ಕೆ ಕರೆದ ಮುಖ್ಯ ಶಿಕ್ಷಕನನ್ನು ರಾಯಚೂರು ನಗರದ ಹೊರವಲಯದಲ್ಲಿರುವ ಸರ್ಕಾರಿ ಶಾಲೆಯ ಮೆಹಬೂಬ್ ಅಲಿ ಎಂದು ಗುರುತಿಸಲಾಗಿದೆ.

ಈತ ತರಬೇತಿಗೆ ಬಂದಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ವರ್ತಿಸಿ, ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ. ಈ ವಿಷಯ ತಿಳಿದ ಕೂಡಲೇ ಶಿಕ್ಷಕಿಯ ಕುಟುಂಬಸ್ಥರು ಶಾಲೆಗೆ ಆಗಮಿಸಿ ಅಲಿ ಬಟ್ಟೆ ಹರಿದು ಸ್ಥಳೀಯರೊಂದಿಗೆ ಸೇರಿ ಮನಬಂದಂತೆ ಥಳಿಸಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕ ಮೆಹಬೂಬ್ ಅಲಿ “ರಾತ್ರಿ ಮಲಗೋದಕ್ಕೆ ಬಾ 10 ಸಾವಿರ ಕೊಡುತ್ತೇನೆ” ಎಂದು ಅಶ್ಲೀಲವಾಗಿ ಮೆಸೇಜ್ ಮಾಡಿ ಹಿಂಸೆ ಕೊಟ್ಟಿದ್ದಾನೆ. ಇದನ್ನು ಶಿಕ್ಷಕಿ ನಮಗೆ ತಿಳಿಸಿದ್ದು ಕೂಡಲೇ ಶಾಲೆಗೆ ಆಗಮಿಸಿ ವಿಚಾರಿಸಿದೆವು. ಮೊದಲು ನಿರಾಕರಿಸಿದ ಆತ ನಂತರ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಶಿಕ್ಷಕಿಯ ಕುಟುಂಬಸ್ಥರು ತಿಳಿಸಿದ್ದಾರೆ.

ಶಿಕ್ಷಕಿಯು ವಿಚಾರವನ್ನು ಇಲಾಖೆಯ ಮೇಲಾಧಿಕಾರಿಗಳಿಗೆ ನೀಡಿದ ದೂರಿನ ಮೇರೆಗೆ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ ಬಡಿಗೇರ್ ವಿಚಾರಣೆ ಕಾಯಂ ಅಮಾನುಗೊಳಿಸಿ ಆದೇಶ ಹೊರಡಿಸಿದ್ದಾರೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600