Job Fair Ilkal guru mahanth swamiji inaugurated job fair in muddebihal

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ


ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬುಧವಾರ ಎಂ.ಜಿ.ವಿ.ಸಿ ಕಾಲೇಜು ಹಾಗೂ ಎಲ್.ಸಿ.ಸಿ ಧಾರವಾಡ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ (Job Fair) ಚಾಲನೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿಗಳ ಸಂಖ್ಯೆ ಇಂತಹ ಮೇಳಗಳಿಂದ ಕಡಿಮೆಯಾಗುತ್ತದೆ. ಉದ್ಯೋಗ ದೊರೆತ ಬಳಿಕ ಹೆತ್ತ ತಂದೆ ತಾಯಿಯವರನ್ನು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳುವ ಕೆಲಸ ಯುವ ಜನಾಂಗ ಮಾಡಬೇಕು ಎಂದರು.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ ಮಾತನಾಡಿ, ಕಾಲೇಜು ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಾಲೇಜುಗಳೆಂದರೆ ಬರೀ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಹೊರ ಕಳಿಸುವುದಲ್ಲ. ಅದರೊಟ್ಟಿಗೆ ಅವರಿಗೆ ಜೀವನ, ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಪ್ರತಿವರ್ಷ ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಧಾರವಾಡ ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್ , ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ,ಪ್ರಮುಖರಾದ ಶಿವರಾಜ ತಡಸದ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಎಂ.ಐ.ಬಿರಾದಾರ, ಎ.ಎ.ಮುಲ್ಲಾ, ಆರ್.ಜಿ.ವಸ್ತ್ರ ದ,ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಶ್ರೀಶೈಲ್ ಹತ್ತಿ,ಪ್ರಕಾಶ ನರಗುಂದ ಇದ್ದರು.

410 ಜನಕ್ಕೆ ಉದ್ಯೋಗಪತ್ರ: ಮೇಳದಲ್ಲಿ ಟಾಟಾ, ಹೋಂಡಾ, ಹುಂಡಯೈ, ಎಚ್.ಡಿ.ಎಫ್.ಸಿ, ಕ್ಯಾಡಮಾಕ್ಸ್, ನೀಡೀ ಫೌಂಡೇಶನ್, ಅಪೋಲೋ, ಏರಟೆಕ್ ಸೇರಿದಂತೆ 26 ಕಂಪನಿಗಳು ಪಾಲ್ಗೊಂಡಿದ್ದವು. ಒಟ್ಟು 910 ಜನ ನೋಂದಾಯಿಸಿಕೊಂಡಿದ್ದು ಅದರಲ್ಲಿ 410 ಜನಕ್ಕೆ ಉದ್ಯೋಗಪತ್ರ ವಿತರಿಸಲಾಗಿದೆ. 180 ಜನರನ್ನು ಅಂತಿಮ ಸುತ್ತಿನ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ಮೇಳದ ಆಯೋಜಕರು ತಿಳಿಸಿದರು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.