Job Fair Ilkal guru mahanth swamiji inaugurated job fair in muddebihal

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ


ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬುಧವಾರ ಎಂ.ಜಿ.ವಿ.ಸಿ ಕಾಲೇಜು ಹಾಗೂ ಎಲ್.ಸಿ.ಸಿ ಧಾರವಾಡ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ (Job Fair) ಚಾಲನೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿಗಳ ಸಂಖ್ಯೆ ಇಂತಹ ಮೇಳಗಳಿಂದ ಕಡಿಮೆಯಾಗುತ್ತದೆ. ಉದ್ಯೋಗ ದೊರೆತ ಬಳಿಕ ಹೆತ್ತ ತಂದೆ ತಾಯಿಯವರನ್ನು ಮರೆಯಬಾರದು. ಅವರನ್ನು ಗೌರವದಿಂದ ನಡೆಸಿಕೊಳ್ಳುವ ಕೆಲಸ ಯುವ ಜನಾಂಗ ಮಾಡಬೇಕು ಎಂದರು.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ ಮಾತನಾಡಿ, ಕಾಲೇಜು ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಕಾಲೇಜುಗಳೆಂದರೆ ಬರೀ ವಿದ್ಯಾರ್ಥಿಗಳಿಗೆ ಪದವಿ ಮುಗಿಸಿ ಹೊರ ಕಳಿಸುವುದಲ್ಲ. ಅದರೊಟ್ಟಿಗೆ ಅವರಿಗೆ ಜೀವನ, ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಪ್ರತಿವರ್ಷ ಆಯೋಜಿಸಲು ಚಿಂತನೆ ನಡೆಸಿದ್ದೇವೆ ಎಂದರು.

ಧಾರವಾಡ ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್ , ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ,ಪ್ರಮುಖರಾದ ಶಿವರಾಜ ತಡಸದ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಎಂ.ಐ.ಬಿರಾದಾರ, ಎ.ಎ.ಮುಲ್ಲಾ, ಆರ್.ಜಿ.ವಸ್ತ್ರ ದ,ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಶ್ರೀಶೈಲ್ ಹತ್ತಿ,ಪ್ರಕಾಶ ನರಗುಂದ ಇದ್ದರು.

410 ಜನಕ್ಕೆ ಉದ್ಯೋಗಪತ್ರ: ಮೇಳದಲ್ಲಿ ಟಾಟಾ, ಹೋಂಡಾ, ಹುಂಡಯೈ, ಎಚ್.ಡಿ.ಎಫ್.ಸಿ, ಕ್ಯಾಡಮಾಕ್ಸ್, ನೀಡೀ ಫೌಂಡೇಶನ್, ಅಪೋಲೋ, ಏರಟೆಕ್ ಸೇರಿದಂತೆ 26 ಕಂಪನಿಗಳು ಪಾಲ್ಗೊಂಡಿದ್ದವು. ಒಟ್ಟು 910 ಜನ ನೋಂದಾಯಿಸಿಕೊಂಡಿದ್ದು ಅದರಲ್ಲಿ 410 ಜನಕ್ಕೆ ಉದ್ಯೋಗಪತ್ರ ವಿತರಿಸಲಾಗಿದೆ. 180 ಜನರನ್ನು ಅಂತಿಮ ಸುತ್ತಿನ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ಮೇಳದ ಆಯೋಜಕರು ತಿಳಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ