Murder Case Image of murder symbol

Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿ ಹತ್ಯೆಯಾಗಿರುವ (Murder Case) ಘಟನೆ ಮಾಗಡಿ ತಾಲೂಕಿನ ಹೂಜಗಲ್ಲು ಬೆಟ್ಟದಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ವರದಿಯಾಗಿದೆ.

ಹತ್ಯೆಯಾದ ಮಹಿಳೆಯನ್ನು 32 ವರ್ಷದ ದಿವ್ಯಾ ಎಂದು ಗುರುತಿಸಲಾಗಿದೆ. ಹತ್ಯೆ ಆರೋಪಿ ಪತಿಯನ್ನು ಉಮೇಶ್ ಎನ್ನಲಾಗಿದೆ.

Join Our Telegram: https://t.me/dcgkannada

ಮದುವೆಯಾಗಿ ಕೆಲವು ವರ್ಷಗಳು ಜೀವನ ನಡೆಸಿದ ಇಬ್ಬರ ನಡುವೆ ಇತ್ತೀಚೆಗೆ ಮನಸ್ತಾಪ ಉಂಟಾಗಿದೆ. ಇದರಿಂದ ನನಗೆ ಡಿವೋರ್ಸ್ ಕೊಟ್ಟುಬಿಡಿ ನಾನು ಬೇರೆ ಜೀವನ ಕಟ್ಟಿಕೊಳ್ಳುತ್ತೇನೆ ಎಂದು ದಿವ್ಯಾ ಕೇಳಿದ್ದಾಳೆ. ಆಗ ಉಮೇಶ್ ಹೆಂಡತಿಯನ್ನು ಸಮಾಧಾನಪಡಿಸಿ ಬುದ್ದಿ ಹೇಳಿದ್ದ ಆದರೆ, ಇದ್ಯಾವುದನ್ನೂ ಕೇಳದ ದಿವ್ಯಾಳಿಗೆ ಉಮೇಶ್ ಡಿವೋರ್ಸ್ ಕೊಡುವುದಾಗಿ ಹೇಳಿದ್ದಾನೆ.

ಡಿವೋರ್ಸ್ ಕೇಸ್ (Divorce Case) ಸಂಬಂಧಿಸಿದಂತೆ ಮಂಗಳವಾರ ಮಾಗಡಿ ಕೋರ್ಟ್‌ಗೆ ದಂಪತಿ ಹಾಜರಾಗಿ ವಿಚಾರಣೆಯನ್ನು ಎದುರಿಸಿದ್ದರಂತೆ. ಇನ್ನು ಹೆಂಡತಿಗೆ ಒಲ್ಲದ ಮನಸ್ಸಿನಿಂದ ಡಿವೋರ್ಸ್ ಕೊಡಲು ಮುಂದಾಗಿದ್ದನಂತೆ ಉಮೇಶ್.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ನ್ಯಾಯಾಲಯದಿಂದ ಮನೆಗೆ ವಾಪಸ್ ಹೋಗುವ ಮೊದಲು ದೇವಸ್ಥಾನಕ್ಕೆ ಹೋಗಿ ಬರೋಣ ಎಂದು ಹೇಳಿ ಹೆಂಡತಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದಾನೆ. ದೇವಸ್ಥಾನದಲ್ಲಿ ದಿವ್ಯಾ ಪೂಜೆ ಮಾಡುತ್ತಿರುವಾಗಲೇ ಆಕೆಯನ್ನು ಹತ್ಯೆ (Murder Case) ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಅಲ್ಲಿಂದ ಮೃತದೇಹವನ್ನು ಚೀಲೂರು ಅರಣ್ಯ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾನೆ ಎ‌ನ್ನಲಾಗಿದೆ.

ಇನ್ನು ಅರಣ್ಯದಲ್ಲಿ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಜಾಡು ಹಿಡಿದು ಹೊರಟ ಪೊಲೀಸರು ಶವದ ಗುರುತು ಪತ್ತೆ ಮಾಡಿದ್ದಾರೆ. ನಂತರ, ಆಕೆಯ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಕುರಿತಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

Latest News

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಒಬ್ಬ ರಾಜಕಾರಣಿಯ ಮಗನ ಮದುವೆಯಲ್ಲಿ ಮಾಡುವ ಖರ್ಚು 500 ಮದುವೆಗಳನ್ನು ಮಾಡಿಕೊಡಬಹುದಾಗಿದೆ.ಮಠಗಳಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು ವರ್ಷ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶ್ರಮಿಸದೇ ನಿದ್ದೆ ಮಾಡಿದ್ರಾ ನೀವು ? ಎಂದ ನಾಡಗೌಡ, ನಿಮಗೇಕೆ ಜಾಗೆ ಗುರುತಿಸಲಾಗಲಿಲ್ಲ.ನಿಮ್ಮಲ್ಲಿ ಇಚ್ಛಾಶಕ್ತಿ