Vachana darshana Minister MB Patil received request from Vijayapur Pragatipara organization

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

ವಿಜಯಪುರ :ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರೆಸ್ಸೆಸ್ ಪ್ರಣೀತ ‘ವಚನ ದರ್ಶನ’ (Vachana darshana) ಪುಸ್ತಕ ಬಿಡುಗಡೆಗೆ ವಿಜಯಪುರದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.

ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರು ಜಿಲ್ಲಾ ಉಸ್ತವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲರು ಹಾಗೂ ಜಿಲ್ಲಾ ಆಪ್ತ ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ನೀಡಿದ್ದು, ಈ ಪುಸ್ತಕ (Vachana darshana) ಬಿಡುಗಡೆ ಕಾರ್ಯಕ್ರಮಕ್ಕೆ ಅನುಮತಿ ಕೊಡಬಾರದು ಎಂದು ವಿಜಯಪುರದ ಪ್ರಗತಿಪರ ಒಕ್ಕೂಟವು ಆಗ್ರಹಿಸಿದ್ದಾರೆ.

Join Out Telegram: https://t.me/dcgkannada

ಈ ಪುಸ್ತಕವು ಬಸವಣ್ಣನವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದು, ಇದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವಂತಹ ಕೃತಿಯಾಗಿದೆ ಎಂದು ಹೇಳಿದ್ದಾರೆ.

ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರಾದ ಕಲ್ಲಪ್ಪ ಕಡೆಚೂರ, ಹನಮಂತ ಚಿಂಚಿಲಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗೊಳಿ, ಮಿಲಿಂದ ಚೆಂಚಲಕರ, ಚಂದ್ರಶೇಖರ ಘಂಟೆಪ್ಪಗೋಳ, ಡಾ. ರವಿ ಬಿರಾದಾರ, ಶಾಂತವೀರ ಥಾಲಬಾವಡಿ, ಮೋಹನ ಕಟ್ಟಿಮನಿ, ರಾಜೇಶ್ವರಿ ಯರನಾಳ, ರಾಜಶೇಖರ ಯರನಾಳ, ಅಕ್ಷಯಕುಮಾರ ಅಜಮನಿ, ಅನಿಲ ಹೊಸಮನಿ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ನಂದಕುಮಾರ ಗೊಬ್ಬೂರ, ದಾನೇಶ್ ಆವಟಿ, ಡಾ ಮಹಾಂತೇಶ್ ಮಡಿಕೇಶ್ವರ್ ,ಅಕ್ಷಯ ,ಈರಣ್ಣ ತೊಂಡೀಕಟ್ಟಿ , ಬಸವರಾಜ ಕಾರಕುರ ಮುಂತಾದವರು ಈ ಸಮಯದಲ್ಲಿ ಇದ್ದರು.

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ

ಮುದ್ದೇಬಿಹಾಳ : ಶರಣ ವೀರೇಶ್ವರರ ಹೆಸರಿನಲ್ಲಿ ಸ್ಥಾಪಿತವಾದ ಬ್ಯಾಂಕ್‌ನಿಂದ ರೈತರು, ವ್ಯಾಪಾರಿಗಳ ಆರ್ಥಿಕ ಚೈತನ್ಯಕ್ಕೆ ಸಹಕಾರ ನೀಡುವ ಕಾರ್ಯ ಮುಂದೆ ಸಾಗಲಿ ಎಂದು ಉಪ್ಪಿನಬೆಟಗೇರಿ ವಿರುಪಾಕ್ಷ ಸ್ವಾಮೀಜಿ ಹೇಳಿದರು.

ಪಟ್ಟಣದ ದಾನೇಶ್ವರಿ ಪೆಟ್ರೋಲ್ ಹಿಂಭಾಗದಲ್ಲಿ ಬುಧವಾರ ನಾಲತವಾಡದ ಶರಣ ವೀರೇಶ್ವರ ಬ್ಯಾಂಕ್ ನೂತನ ಶಾಖೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿವಯೋಗಮಂದಿರದಲ್ಲಿ ಶರಣ ವೀರೇಶ್ವರರ ಪುತ್ಥಳಿ ಅವರ ಹೆಸರಿನ ಉದ್ಯಾನವನ ಇದೆ. ಅಲ್ಲಿ ಜಂಗಮ ವಟುಗಳಿಗೆ ಪಾಠ ಶಾಲೆಯಾಗಿದ್ದು ಶ್ರೇಷ್ಠ ಶರಣರ ಹೆಸರಿನಲ್ಲಿ ಬ್ಯಾಂಕು ಉತ್ತಮ ಅಭಿವೃದ್ಧಿ ಹೊಂದಿದೆ ಎಂದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಮಾತನಾಡಿ, ದಿ.ಬಿ.ಎಂ.ಅಂಗಡಿ ಅವರು ಹುಟ್ಟು ಹಾಕಿದ ಬ್ಯಾಂಕು ಇಂದು ಹೆಮ್ಮರವಾಗಿ ಬೆಳೆದಿದೆ.ಬ್ಯಾಂಕುಗಳ ಆರ್ಥಿಕ ಸದೃಢತೆಗೆ ಗ್ರಾಹಕರ ನಿಯಮಿತ ವ್ಯವಹಾರ ಆಧಾರವಾಗಿದೆ ಎಂದರು.

ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ,ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್, ಗಣ್ಯ ವರ್ತಕ ಬಿ.ಸಿ.ಮೋಟಗಿ,ಸಲಹಾ ಸಮಿತಿ ಪ್ರಮುಖ ಶಾಂತಪ್ಪ ಕಮತ, ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ, ಬ್ಯಾಂಕ ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಇದ್ದರು.ಡಿ.ಆರ್.ಮಳಖೇಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೀರೇಶ ಬಂಗಾರಗುಂಡ ವಚನಗೀತೆಗೆ ಭರತನಾಟ್ಯ ನೃತ್ಯಗೈದರು. ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು. ರಾಜು ಹಾದಿಮನಿ ನಿರೂಪಿಸಿದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600