Vachana darshana Minister MB Patil received request from Vijayapur Pragatipara organization

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

ವಿಜಯಪುರ :ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರೆಸ್ಸೆಸ್ ಪ್ರಣೀತ ‘ವಚನ ದರ್ಶನ’ (Vachana darshana) ಪುಸ್ತಕ ಬಿಡುಗಡೆಗೆ ವಿಜಯಪುರದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.

ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರು ಜಿಲ್ಲಾ ಉಸ್ತವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲರು ಹಾಗೂ ಜಿಲ್ಲಾ ಆಪ್ತ ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ನೀಡಿದ್ದು, ಈ ಪುಸ್ತಕ (Vachana darshana) ಬಿಡುಗಡೆ ಕಾರ್ಯಕ್ರಮಕ್ಕೆ ಅನುಮತಿ ಕೊಡಬಾರದು ಎಂದು ವಿಜಯಪುರದ ಪ್ರಗತಿಪರ ಒಕ್ಕೂಟವು ಆಗ್ರಹಿಸಿದ್ದಾರೆ.

Join Out Telegram: https://t.me/dcgkannada

ಈ ಪುಸ್ತಕವು ಬಸವಣ್ಣನವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದು, ಇದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವಂತಹ ಕೃತಿಯಾಗಿದೆ ಎಂದು ಹೇಳಿದ್ದಾರೆ.

ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರಾದ ಕಲ್ಲಪ್ಪ ಕಡೆಚೂರ, ಹನಮಂತ ಚಿಂಚಿಲಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗೊಳಿ, ಮಿಲಿಂದ ಚೆಂಚಲಕರ, ಚಂದ್ರಶೇಖರ ಘಂಟೆಪ್ಪಗೋಳ, ಡಾ. ರವಿ ಬಿರಾದಾರ, ಶಾಂತವೀರ ಥಾಲಬಾವಡಿ, ಮೋಹನ ಕಟ್ಟಿಮನಿ, ರಾಜೇಶ್ವರಿ ಯರನಾಳ, ರಾಜಶೇಖರ ಯರನಾಳ, ಅಕ್ಷಯಕುಮಾರ ಅಜಮನಿ, ಅನಿಲ ಹೊಸಮನಿ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ನಂದಕುಮಾರ ಗೊಬ್ಬೂರ, ದಾನೇಶ್ ಆವಟಿ, ಡಾ ಮಹಾಂತೇಶ್ ಮಡಿಕೇಶ್ವರ್ ,ಅಕ್ಷಯ ,ಈರಣ್ಣ ತೊಂಡೀಕಟ್ಟಿ , ಬಸವರಾಜ ಕಾರಕುರ ಮುಂತಾದವರು ಈ ಸಮಯದಲ್ಲಿ ಇದ್ದರು.

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ

ಮುದ್ದೇಬಿಹಾಳ : ಶರಣ ವೀರೇಶ್ವರರ ಹೆಸರಿನಲ್ಲಿ ಸ್ಥಾಪಿತವಾದ ಬ್ಯಾಂಕ್‌ನಿಂದ ರೈತರು, ವ್ಯಾಪಾರಿಗಳ ಆರ್ಥಿಕ ಚೈತನ್ಯಕ್ಕೆ ಸಹಕಾರ ನೀಡುವ ಕಾರ್ಯ ಮುಂದೆ ಸಾಗಲಿ ಎಂದು ಉಪ್ಪಿನಬೆಟಗೇರಿ ವಿರುಪಾಕ್ಷ ಸ್ವಾಮೀಜಿ ಹೇಳಿದರು.

ಪಟ್ಟಣದ ದಾನೇಶ್ವರಿ ಪೆಟ್ರೋಲ್ ಹಿಂಭಾಗದಲ್ಲಿ ಬುಧವಾರ ನಾಲತವಾಡದ ಶರಣ ವೀರೇಶ್ವರ ಬ್ಯಾಂಕ್ ನೂತನ ಶಾಖೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿವಯೋಗಮಂದಿರದಲ್ಲಿ ಶರಣ ವೀರೇಶ್ವರರ ಪುತ್ಥಳಿ ಅವರ ಹೆಸರಿನ ಉದ್ಯಾನವನ ಇದೆ. ಅಲ್ಲಿ ಜಂಗಮ ವಟುಗಳಿಗೆ ಪಾಠ ಶಾಲೆಯಾಗಿದ್ದು ಶ್ರೇಷ್ಠ ಶರಣರ ಹೆಸರಿನಲ್ಲಿ ಬ್ಯಾಂಕು ಉತ್ತಮ ಅಭಿವೃದ್ಧಿ ಹೊಂದಿದೆ ಎಂದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಮಾತನಾಡಿ, ದಿ.ಬಿ.ಎಂ.ಅಂಗಡಿ ಅವರು ಹುಟ್ಟು ಹಾಕಿದ ಬ್ಯಾಂಕು ಇಂದು ಹೆಮ್ಮರವಾಗಿ ಬೆಳೆದಿದೆ.ಬ್ಯಾಂಕುಗಳ ಆರ್ಥಿಕ ಸದೃಢತೆಗೆ ಗ್ರಾಹಕರ ನಿಯಮಿತ ವ್ಯವಹಾರ ಆಧಾರವಾಗಿದೆ ಎಂದರು.

ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ,ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್, ಗಣ್ಯ ವರ್ತಕ ಬಿ.ಸಿ.ಮೋಟಗಿ,ಸಲಹಾ ಸಮಿತಿ ಪ್ರಮುಖ ಶಾಂತಪ್ಪ ಕಮತ, ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ, ಬ್ಯಾಂಕ ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಇದ್ದರು.ಡಿ.ಆರ್.ಮಳಖೇಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೀರೇಶ ಬಂಗಾರಗುಂಡ ವಚನಗೀತೆಗೆ ಭರತನಾಟ್ಯ ನೃತ್ಯಗೈದರು. ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು. ರಾಜು ಹಾದಿಮನಿ ನಿರೂಪಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ