Murder Case Image of murder symbol

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಈ ಕೃತ್ಯದ (Crime story) ಸಂಬಂಧ ಮೃತಳ ಪತಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ. ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು
ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದ್ದರು.

ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ.

Latest News

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು ಗ್ರಾಮದೇವತೆ ಶ್ರೀ ಗದ್ಯಮದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು. ಪ್ರತಿ ವರ್ಷದಂತೆ ಈ ವರ್ಷ ಸೇರಿ 23ನೇ ವರ್ಷ ಪಾದಯಾತ್ರೆ ಇದಾಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯು ಸರಿ-ಸುಮಾರು 120 ಕಿಲೋ ಮೀಟರ್ ನಷ್ಟು ದೂರವಿದ್ಧಿ ಆದರೂ ಸಹಾ ಮಳೆ, ಗಾಳಿ, ಚಳ್ಳಿ,

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ ಪೃಥ್ವಿ ನಾಡಗೌಡ, ಅಪ್ಪು ನಾಡಗೌಡ, ಮಲ್ಲಿಕಾರ್ಜುನ ನಾಡಗೌಡ ಇದ್ದರು.